ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಶಾಲೆಯ ಪರಿಸರ ಸಂಘ, ಸ್ಕೌಟ್ ಅಂಡ್ ಗೈಡ್ ನ ವಿದ್ಯಾರ್ಥಿಗಳು ಮತ್ತು ಸಂಸ್ಕೃತಿಕ ಸಂಘದ ಸದಸ್ಯರು ಭತ್ತದ ಗದ್ದೆಯಲ್ಲಿ ಸೇರಿ ವಿವಿಧ ಚಟುವಟಿಕೆಗಳನ್ನು ನಡೆಸಿದರು. ಸ್ಕೌಟ್ ಅಂಡ್ ಗೈಡ್, ಪರಿಸರ ಸಂಘ ಮತ್ತು ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳಿಗೆ ಶಾರೀರಿಕ ಚಟುವಟಿಗೆಗೆ ಪ್ರೋತ್ಸಾಹ ನೀಡುವ ಜೊತೆಗೆ, ಮಕ್ಕಳಲ್ಲಿ ತಂಡಭಾವನೆ ಹಾಗೂ ಸ್ನೇಹ ಭಾವ, ಸ್ಪರ್ಧಾತ್ಮಕ ಮನೋಭಾವವೂ ಬೆಳೆಯುವ ಪರಿಸರ ಒದಗಿಸಲಾಗಿತ್ತು.


ಪರಿಸರ ಸಂಘದ ಹಾಗೂ ಸ್ಕೌಟ್ ಹಾಗೂ ಗೈಡ್ ಸದಸ್ಯರು ಗದ್ದೆಯ ಬದುವನ್ನು ಸರಿಪಡಿಸಿ, ಕಲ್ಲು ಹಾಗೂ ಕಸವನ್ನು ತೆಗೆದು, ಮಣ್ಣನ್ನು ಹದಗೊಳಿಸಿ ನಾಟಿಗೆ ಅಣಿಗೊಳಿಸಿದರು.


ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳ ಜೊತೆಗೆ ಪರಿಸರ ಸಂಘದ ಹಾಗೂ ಸ್ಕೌಟ್ ಹಾಗೂ ಗೈಡ್ ವಿದ್ಯಾರ್ಥಿಗಳು ತುಳುನಾಡು ನುಡಿಗೆ ಸಂಬಂಧಿಸಿದ ನೃತ್ಯಗಳನ್ನು ಪ್ರದರ್ಶಿಸಿದರು.ಅಡಿಕೆ ಹಾಳೆಯಲ್ಲಿ ಕುಳಿತು ಕೆಸರಿನಲ್ಲಿ ಎಳೆಯುವ ಆಟ, ಕೆಸರು ಗದ್ದೆ ಓಟ ಇತ್ಯಾದಿ ವಿವಿಧ ವಿನೋದಾವಳಿ ಆಟಗಳನ್ನು ಆಡಿ ವಿದ್ಯಾರ್ಥಿಗಳು ಸಂತಸ ಪಟ್ಟರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ಮೂಡಿಬಂದ ಈ ಕಾರ್ಯಕ್ರಮವನ್ನು ಶಾಲೆಯ ಸ್ಕೌಟ್ ಅಂಡ್ ಗೈಡ್ ಉಸ್ತುವಾರಿ ಶಿಕ್ಷಕರು, ಪರಿಸರ ಸಂಘದ ಶಿಕ್ಷಕರು ಮತ್ತು ಸಾಂಸ್ಕೃತಿಕ ಸಂಘದ ಶಿಕ್ಷಕರು ಸಂಯೋಜಿಸಿ ಯಶಸ್ವಿಯಾಗಿ ನಡೆಸಿಕೊಟ್ಟರು.

Related posts

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಅಕ್ರಮ ಗೋಹತ್ಯೆ ಪ್ರಕರಣದಲ್ಲಿ ತಕ್ಷಿರು ನಡೆಸಲು ಉದ್ದೇಶಿಸಿದ್ದ ಸ್ಥಳಗಳ ಜಪ್ತಿ

Suddi Udaya

ಕೊಲ್ಪಾಡಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ: ಅಧ್ಯಕ್ಷರಾಗಿ ಲೋಕೇಶ್ ಓಣಾಜೆ ಆಯ್ಕೆ‌

Suddi Udaya
error: Content is protected !!