July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಶಾಲೆಯ ಪರಿಸರ ಸಂಘ, ಸ್ಕೌಟ್ ಅಂಡ್ ಗೈಡ್ ನ ವಿದ್ಯಾರ್ಥಿಗಳು ಮತ್ತು ಸಂಸ್ಕೃತಿಕ ಸಂಘದ ಸದಸ್ಯರು ಭತ್ತದ ಗದ್ದೆಯಲ್ಲಿ ಸೇರಿ ವಿವಿಧ ಚಟುವಟಿಕೆಗಳನ್ನು ನಡೆಸಿದರು. ಸ್ಕೌಟ್ ಅಂಡ್ ಗೈಡ್, ಪರಿಸರ ಸಂಘ ಮತ್ತು ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳಿಗೆ ಶಾರೀರಿಕ ಚಟುವಟಿಗೆಗೆ ಪ್ರೋತ್ಸಾಹ ನೀಡುವ ಜೊತೆಗೆ, ಮಕ್ಕಳಲ್ಲಿ ತಂಡಭಾವನೆ ಹಾಗೂ ಸ್ನೇಹ ಭಾವ, ಸ್ಪರ್ಧಾತ್ಮಕ ಮನೋಭಾವವೂ ಬೆಳೆಯುವ ಪರಿಸರ ಒದಗಿಸಲಾಗಿತ್ತು.


ಪರಿಸರ ಸಂಘದ ಹಾಗೂ ಸ್ಕೌಟ್ ಹಾಗೂ ಗೈಡ್ ಸದಸ್ಯರು ಗದ್ದೆಯ ಬದುವನ್ನು ಸರಿಪಡಿಸಿ, ಕಲ್ಲು ಹಾಗೂ ಕಸವನ್ನು ತೆಗೆದು, ಮಣ್ಣನ್ನು ಹದಗೊಳಿಸಿ ನಾಟಿಗೆ ಅಣಿಗೊಳಿಸಿದರು.


ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳ ಜೊತೆಗೆ ಪರಿಸರ ಸಂಘದ ಹಾಗೂ ಸ್ಕೌಟ್ ಹಾಗೂ ಗೈಡ್ ವಿದ್ಯಾರ್ಥಿಗಳು ತುಳುನಾಡು ನುಡಿಗೆ ಸಂಬಂಧಿಸಿದ ನೃತ್ಯಗಳನ್ನು ಪ್ರದರ್ಶಿಸಿದರು.ಅಡಿಕೆ ಹಾಳೆಯಲ್ಲಿ ಕುಳಿತು ಕೆಸರಿನಲ್ಲಿ ಎಳೆಯುವ ಆಟ, ಕೆಸರು ಗದ್ದೆ ಓಟ ಇತ್ಯಾದಿ ವಿವಿಧ ವಿನೋದಾವಳಿ ಆಟಗಳನ್ನು ಆಡಿ ವಿದ್ಯಾರ್ಥಿಗಳು ಸಂತಸ ಪಟ್ಟರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ಮೂಡಿಬಂದ ಈ ಕಾರ್ಯಕ್ರಮವನ್ನು ಶಾಲೆಯ ಸ್ಕೌಟ್ ಅಂಡ್ ಗೈಡ್ ಉಸ್ತುವಾರಿ ಶಿಕ್ಷಕರು, ಪರಿಸರ ಸಂಘದ ಶಿಕ್ಷಕರು ಮತ್ತು ಸಾಂಸ್ಕೃತಿಕ ಸಂಘದ ಶಿಕ್ಷಕರು ಸಂಯೋಜಿಸಿ ಯಶಸ್ವಿಯಾಗಿ ನಡೆಸಿಕೊಟ್ಟರು.

Related posts

ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

Suddi Udaya

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!