ಕನ್ಯಾಡಿ: ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ರವರು ಜು . 15 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ನಿರ್ಮಾಣವಾಗುತ್ತಿರುವ ಪುನಶ್ಚೇತನ ಕೇಂದ್ರದ ಕಟ್ಟಡವನ್ನು ವೀಕ್ಷಿಸಿದರು.
ಕರ್ನಾಟಕದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಉತ್ತಮ ಪುನಶ್ಚೇತನವನ್ನು ನೀಡುವ ದೃಷ್ಟಿಯಿಂದ ಈ ಯೋಜನೆಗೆ ತಮ್ಮ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಮೂಲಕ 2024-25 ಮತ್ತು 2025-26 ನೇ ಸಾಲಿನಲ್ಲಿ ಒಟ್ಟು 10 ಲಕ್ಷ ರೂಪಾಯಿಯನ್ನು ಮಂಜೂರು ಮಾಡಿರುತ್ತಾರೆ.
ಈ ಸಂದರ್ಭದಲ್ಲಿ ಸೇವಾಧಾಮದ ಸಂಸ್ಥಾಪಕ ಕೆ. ವಿನಾಯಕ ರಾವ್ ಸಂಸ್ಥೆಯ ಪರವಾಗಿ ಕೃತಜ್ಞತೆ ಸಲ್ಲಿಸಿ ಮುಂಬರುವ ದಿನಗಳಲ್ಲಿಯೂ ಸಹಕರಿಸುವಂತೆ ಮನವಿ ಮಾಡಿದರು.











