25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಭೇಟಿ

ಕನ್ಯಾಡಿ: ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ರವರು ಜು . 15 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ನಿರ್ಮಾಣವಾಗುತ್ತಿರುವ ಪುನಶ್ಚೇತನ ಕೇಂದ್ರದ ಕಟ್ಟಡವನ್ನು ವೀಕ್ಷಿಸಿದರು.

ಕರ್ನಾಟಕದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಉತ್ತಮ ಪುನಶ್ಚೇತನವನ್ನು ನೀಡುವ ದೃಷ್ಟಿಯಿಂದ ಈ ಯೋಜನೆಗೆ ತಮ್ಮ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಮೂಲಕ 2024-25 ಮತ್ತು 2025-26 ನೇ ಸಾಲಿನಲ್ಲಿ ಒಟ್ಟು 10 ಲಕ್ಷ ರೂಪಾಯಿಯನ್ನು ಮಂಜೂರು ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಸೇವಾಧಾಮದ ಸಂಸ್ಥಾಪಕ ಕೆ. ವಿನಾಯಕ ರಾವ್ ಸಂಸ್ಥೆಯ ಪರವಾಗಿ ಕೃತಜ್ಞತೆ ಸಲ್ಲಿಸಿ ಮುಂಬರುವ ದಿನಗಳಲ್ಲಿಯೂ ಸಹಕರಿಸುವಂತೆ ಮನವಿ ಮಾಡಿದರು.

Related posts

ಮುಂಡಾಜೆ ವಿನೋದ್ ಖಾಡಿಲ್ಕರ್ ನಿಧನ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಕುವೆಟ್ಟು ಗ್ರಾ.ಪಂ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣ ಶಿಬಿರ ಉದ್ಘಾಟನೆ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

Suddi Udaya

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya
error: Content is protected !!