25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಮಂಗಳೂರು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಜ್ಞ ವೈದ್ಯರು ಮತ್ತು ಪ್ರೊಫೆಸರ್ ಗಳ ತಂಡ ಭೇಟಿ

ಕಕ್ಕಿಂಜೆ: ಮಂಗಳೂರಿನ (ಕೆಎಂಸಿ) ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ತಜ್ಞ ವೈದ್ಯರು ಮತ್ತು ಪ್ರೊಫೆಸರ್ ಗಳ ತಂಡ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿ ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವುದರ ಬಗ್ಗೆ ಚರ್ಚಿಸಿದರು.

ಕೆಎಂಸಿ ಆಸ್ಪತ್ರೆ ಸಮುದಾಯ ವೈದ್ಯಕೀಯ ವಿಭಾಗವು(Department of Community Medicine) ಮತ್ತು ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆಯೊಂದಿಗೆ ಹೊಸ ಒಡಂಬಡಿಕೆಯನ್ನು ಮಾಡಿಕೊಂಡಿದೆ. ಈ ಒಡಂಬಡಿಕೆಯು ಕೆಎಂಸಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಜ್ಞವೈದ್ಯರ ಲಭ್ಯತೆ, ಉತ್ತಮ ವೈದ್ಯಕೀಯ ಸೇವೆಗಳನ್ನು ಗ್ರಾಮೀಣ ಪ್ರದೇಶಗಳಿಗೆ ವಿಸ್ತರಿಸಲು, ಗುಣಮಟ್ಟದ ಆರೋಗ್ಯ ಸೇವೆ ನೀಡಲು ಇನ್ನಷ್ಟು ಸಹಕಾರಿಯಾಗಲಿದೆ ಮತ್ತು ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ತಜ್ಞವೈದ್ಯರು ಪ್ರತಿದಿನ ಸಂದರ್ಶನಕ್ಕೆ ಲಭ್ಯರಿರುತ್ತಾರೆ.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ನಿರ್ದೆಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ, ಕೆಎಂಸಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನ ಮಿತ್ರ, ಸಮುದಾಯ ವೈದ್ಯಕೀಯ ವಿಭಾಗದ ಪ್ರೊಫೆಸರ್ ಗಳಾದ ಡಾ.ಮಿಥುನ್ ಹಾಗೂ ಡಾ.ಅಜಿತ್, ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ವಂದನಾ ಎಂ ಇರ್ವತ್ರಾಯ, ಮುಖ್ಯ ವೈದ್ಯಾಧಿಕಾರಿ ಡಾ.ಅಲ್ಬೀನ್ ಜೋಸೆಫ್, ವೈದ್ಯಾಧಿಕಾರಿ ಡಾ.ಮೌಲ್ಯ ಆಡಳಿತಾಧಿಕಾರಿ ಶ್ರೀಮತಿ ಜ್ಯೋತಿ ವಿ ಸ್ವರೂಪ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಕೊಕ್ಕಡ : ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya
error: Content is protected !!