23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಕಳೆಂಜ: ಜು.14ರಂದು ನಾಪತ್ತೆಯಾಗಿದ್ದ ಕಳೆಂಜ ಗ್ರಾಮದ ರೆಂಜದಡಿ ಮನೆ ನಿವಾಸಿ ಜಿನ್ನಪ್ಪ ಗೌಡ(76) ರವರ ಶವ ಜು.15ರಂದು ಪತ್ತೆಯಾಗಿದೆ.

ಜು.14ರಂದು ಕಾಣೆಯಾಗಿದ್ದ ಜಿನ್ನಪ್ಪ ಗೌಡ ಅವರ ಪತ್ತೆಗಾಗಿ ಅವರ ಮನೆಯವರು ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದರು. ಆದರೂ ಪತ್ತೆ ಆಗಿರಲಿಲ್ಲ. ಇಂದು ಮುಂಜಾನೆ ಮತ್ತೆ ಸ್ಥಳೀಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಕಾಯರ್ತಡ್ಕದಿಂದ ಅಮ್ಮಿನಡ್ಕ ಕಡೆಗೆ ಬಂದಿರುವುದು ತಿಳಿದು ಬಂದಿರುವುದರಿಂದ ಮನೆಯವರು ಮತ್ತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಮಧ್ಯಾಹ್ನ ನಂತರ ಅರಸಿನಮಕ್ಕಿ- ಶಿಶಿಲ ಶೌರ್ಯ ವಿಪತ್ತು ತಂಡದ ಸದಸ್ಯರೊಂದಿಗೆ ಕುದ್ದ ಸಮೀಪ ಇರುವ ಅರಣ್ಯ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಶವವಾಗಿ ಪತ್ತೆಯಾಗಿದೆ.

ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಊಹೆ ಮಾಡಿಕೊಳ್ಳುತ್ತಿದ್ದು ನೈಜ ಕಾರಣ ಇನ್ನಷ್ಟೇ ತನಿಖೆಯ ಮೂಲಕ ತಿಳಿಯಬೇಕಿದೆ.ಮೃತರು ಪುತ್ರ ಶಿವರಾಂ, ಪುತ್ರಿಯರಾದ ವೇದಾವತಿ, ಕುಸುಮ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

Suddi Udaya

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

Suddi Udaya

ಮಲವಂತಿಗೆ : ಕೃಷಿಕನನ್ನು ಒಕ್ಕೆಲಬ್ಬಿಸಿ ಕೃಷಿಯನ್ನು ಸಂಪೂರ್ಣ ನಾಶ ಪಡಿಸಿದ ಅರಣ್ಯ ಇಲಾಖೆ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಮಲೆಂಗಲ್ಲು ನಿವಾಸಿ, ನಿವೃತ್ತ ಟೆಲಿಫೋನ್ ಎಕ್ಸ್‌ಚೆಂಜರ್‌ ವೈ ಹಾಲೊಜಿ ರಾವ್ ನಿಧನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!