ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗಮಕ, ಯಕ್ಷಗಾನದಲ್ಲಿ ವಿಶೇಷ ಸಾಧನೆ: ಮಧೂರು ಮೋಹನ ಕಲ್ಲೂರಾಯರಿಗೆ ರಾಜ್ಯ ಪ್ರಶಸ್ತಿ

ಬೆಳ್ತಂಗಡಿ: ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಇವರು ಕೊಡ ಮಾಡುವ ಹಳ್ಳೂರು ಹನುಮಂತಪ್ಪ ವರಮಹಾಲಕ್ಷ್ಮಮ್ಮ ರಾಜ್ಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಆರಿಸಲ್ಪಟ್ಟ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯರಿಗೆ ನೀಡಲಾಗಿದೆ.

ರಾಜ್ಯದ ಪ್ರತಿಷ್ಠಿತ ಪತ್ರಿಕೆ ‘ವಿಜಯವಾಣಿ ‘ಪತ್ರಿಕೆಯಿಂದ ಜಿಲ್ಲಾವಾರು ಆರಿಸಲ್ಪಟ್ಟಂತಹ ಸಾಧಕರಿಗೆ ಇದನ್ನು ನೀಡಲಾಗಿದೆ. ಗಮಕ, ಯಕ್ಷಗಾನ, ವಿವಿಧ ಕಲಾ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯರಿಗೆ ಈ ಪ್ರಶಸ್ತಿಯನ್ನು ಜು. 6 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಸಮಾರಂಭದಲ್ಲಿ ಮಠಾಧಿಪತಿಗಳ ದಿವ್ಯ ಸಾನಿಧ್ಯದಲ್ಲಿ, ಗಣ್ಯರ ಉಪಸ್ಥಿತಿಯಲ್ಲಿ ಪ್ರದಾನ ಮಾಡಲಾಯಿತು. ಮೋಹನ ಕಲ್ಲೂರಾಯರ ಪರವಾಗಿ ಅವರ ಪುತ್ರ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ಬೆಂಗಳೂರಿನಲ್ಲಿ ಸನ್ಮಾನವನ್ನು ಸ್ವೀಕರಿಸಿದರು.ಮಧೂರು ಮೋಹನ ಕಲ್ಲೂರಾಯರು ದ.ಕ ಜಿಲ್ಲೆಯ ಕರ್ನಾಟಕ ಗಮಕ ಕಲಾ ಪರಿಷತ್ತಿನ ಅಧ್ಯಕ್ಷರಾಗಿದ್ದಾರೆ.

Related posts

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

Suddi Udaya

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

Suddi Udaya

ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ರೂ. 1ಲಕ್ಷ ದೇಣಿಗೆ

Suddi Udaya
error: Content is protected !!