23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಎರಡು ದಿನದ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ :ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಡಿ.ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ ಇದರ ನೇತೃತ್ವದಲ್ಲಿ , ಸಿ.ಒ.ಡಿ.ಪಿ ಮಂಗಳೂರು, ಕಿಡ್ಸ್ ಪುತ್ತೂರು ಹಾಗೂ ಸಂಪದ ಉಡುಪಿ ಇವುಗಳ ಸಹಕಾರದಿಂದ ಕ್ಲಸ್ಟರ್ ಮಟ್ಟದ ಲಿಂಗ ಸಮಾನತೆ ಮತ್ತು ನ್ಯಾಯದ ಕುರಿತು ತರಬೇತಿ ಕಾರ್ಯಕ್ರಮವನ್ನು ಜು.15 ಮತ್ತು 16 ಎರಡು ದಿನಗಳು ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಮಂಜುಳಾ ಜೋನ್ ವಹಿಸಿದ್ದರು. ಉದ್ಘಾಟನೆಯನ್ನು ಕ್ರಾಸ್ ಸಂಸ್ಥೆ ಬೆಂಗಳೂರು ಇದರ ನಿರ್ದೇಶಕರಾದ ವಂ.ಫಾ. ರಿಚರ್ಡ್ ಪಾಯಸ್ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಕ್ರಾಸ್ ಸಂಸ್ಥೆಯ ಮಹಿಳಾ ಸಬಲೀಕರಣ ಯೋಜನೆಯ ರಾಜ್ಯ ಸಂಯೋಜಕಿ ಸಿ. ನ್ಯಾನ್ಸಿ ಲೋಬೊ ಹಾಗೂ ವಂ. ಫಾ. ರಿಚರ್ಡ್ ಪಾಯಸ್ ರವರು ಲಿಂಗ ಸಮಾನತೆ ಮತ್ತು ನ್ಯಾಯದ ಬಗ್ಗೆ ತರಬೇತಿ ನೀಡಿದರು. ಶ್ರೀಮತಿ ಸೀಮಾ, ಸಿ.ಒ.ಡಿ.ಪಿ, ಶ್ರೀಮತಿ ಐಡಾ, ಸಂಪದ, ಮತ್ತು ಶ್ರೀಮತಿ ಅನಿಜಾ, ಕಿಡ್ಸ್ ಸಂಸ್ಥೆ ಇಲ್ಲಿನ ಒಕ್ಕೂಟ ಪ್ರತಿನಿಧಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಿಡ್ಸ್ ಸಂಸ್ಥೆಯ ಸಿಬ್ಬಂದಿಗಳು ಪ್ರಾರ್ಥನೆ ಗೀತೆ ಹಾಡಿದರು. ಡಿ.ಕೆ.ಆರ್.ಡಿ.ಎಸ್ ಕಾರ್ಯಕರ್ತೆ ಶ್ರೀಮತಿ ಸುಶೀಲಾ ಸ್ವಾಗತಿಸಿದರು. ಮಾರ್ಕ್ ಡಿ ಸೋಜ ವಂದಿಸಿದರು. ಸಂಯೋಜಕಿ ಶ್ರೀಮತಿ ಸಿಸಿಲ್ಯಾ ತಾವ್ರೊ ಕಾರ್ಯಕ್ರಮ ನಿರೂಪಿಸಿದರು. ಒಟ್ಟು 40 ಮಂದಿ ಭಾಗವಹಿಸಿದ್ದರು.

Related posts

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಸಿದ್ಧತಾ ಸಭೆ ಹಾಗೂ ಸಮಿತಿ ರಚನೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya
error: Content is protected !!