July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಎರಡು ದಿನದ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ :ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಡಿ.ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ ಇದರ ನೇತೃತ್ವದಲ್ಲಿ , ಸಿ.ಒ.ಡಿ.ಪಿ ಮಂಗಳೂರು, ಕಿಡ್ಸ್ ಪುತ್ತೂರು ಹಾಗೂ ಸಂಪದ ಉಡುಪಿ ಇವುಗಳ ಸಹಕಾರದಿಂದ ಕ್ಲಸ್ಟರ್ ಮಟ್ಟದ ಲಿಂಗ ಸಮಾನತೆ ಮತ್ತು ನ್ಯಾಯದ ಕುರಿತು ತರಬೇತಿ ಕಾರ್ಯಕ್ರಮವನ್ನು ಜು.15 ಮತ್ತು 16 ಎರಡು ದಿನಗಳು ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಮಂಜುಳಾ ಜೋನ್ ವಹಿಸಿದ್ದರು. ಉದ್ಘಾಟನೆಯನ್ನು ಕ್ರಾಸ್ ಸಂಸ್ಥೆ ಬೆಂಗಳೂರು ಇದರ ನಿರ್ದೇಶಕರಾದ ವಂ.ಫಾ. ರಿಚರ್ಡ್ ಪಾಯಸ್ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಕ್ರಾಸ್ ಸಂಸ್ಥೆಯ ಮಹಿಳಾ ಸಬಲೀಕರಣ ಯೋಜನೆಯ ರಾಜ್ಯ ಸಂಯೋಜಕಿ ಸಿ. ನ್ಯಾನ್ಸಿ ಲೋಬೊ ಹಾಗೂ ವಂ. ಫಾ. ರಿಚರ್ಡ್ ಪಾಯಸ್ ರವರು ಲಿಂಗ ಸಮಾನತೆ ಮತ್ತು ನ್ಯಾಯದ ಬಗ್ಗೆ ತರಬೇತಿ ನೀಡಿದರು. ಶ್ರೀಮತಿ ಸೀಮಾ, ಸಿ.ಒ.ಡಿ.ಪಿ, ಶ್ರೀಮತಿ ಐಡಾ, ಸಂಪದ, ಮತ್ತು ಶ್ರೀಮತಿ ಅನಿಜಾ, ಕಿಡ್ಸ್ ಸಂಸ್ಥೆ ಇಲ್ಲಿನ ಒಕ್ಕೂಟ ಪ್ರತಿನಿಧಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಿಡ್ಸ್ ಸಂಸ್ಥೆಯ ಸಿಬ್ಬಂದಿಗಳು ಪ್ರಾರ್ಥನೆ ಗೀತೆ ಹಾಡಿದರು. ಡಿ.ಕೆ.ಆರ್.ಡಿ.ಎಸ್ ಕಾರ್ಯಕರ್ತೆ ಶ್ರೀಮತಿ ಸುಶೀಲಾ ಸ್ವಾಗತಿಸಿದರು. ಮಾರ್ಕ್ ಡಿ ಸೋಜ ವಂದಿಸಿದರು. ಸಂಯೋಜಕಿ ಶ್ರೀಮತಿ ಸಿಸಿಲ್ಯಾ ತಾವ್ರೊ ಕಾರ್ಯಕ್ರಮ ನಿರೂಪಿಸಿದರು. ಒಟ್ಟು 40 ಮಂದಿ ಭಾಗವಹಿಸಿದ್ದರು.

Related posts

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

Suddi Udaya

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಯಾಂತ್ರಿಕೃತ ಭತ್ತ ಕೃಷಿಗೆ ಚಾಲನೆ

Suddi Udaya

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!