37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚೆ

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆಯು ಶಾಸಕ ಹರೀಶ್ ಪೂಂಜ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ನಗರ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ,ವೈದ್ಯಾಧಿಕಾರಿ ಡಾ.ರಮೇಶ್ ಸ್ವಾಗತಿಸಿದರು., ಆರೋಗ್ಯಾಧಿಕಾರಿಯಾದ ಡಾ.ಸಂಜಾತ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಬಂಕಪ್ಪ, ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಕ್ಲೆಮೆಂಟ್ ಬೆಂಜಮಿನ್ ಬ್ರಾಗ್ಸ್, ಡಾ.ಶಶಿಕಾಂತ್ ಡೋಂಗ್ರೆ, ಡಾ.ಶಶಾಂಕ್, ಡಾ.ತಾರಕೇಶ್ವರಿ, ಡಾ.ಆಶಾಲತಾ, ಡಾ.ಹೇಮಲತಾ, ಡಾ.ರಶ್ಮಿ ಉಪಸ್ಥಿತರಿದ್ದರು.


ಸಭೆಯಲ್ಲಿ ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚಿಸಲಾಯಿತು. ಆಸ್ಪತ್ರೆಯ ಮೂಲಭೂತ ಸೌಕರ್ಯಗಳಿಗೆ ಸರಕಾರದಿಂದ ಅನುದಾನ ಪಡೆಯಲು ಅಂದಾಜು ಪಟ್ಟಿ ತಯಾರಿಸುವಂತೆ ಸಭೆಯಲ್ಲಿ ತಿಳಿಸಿದರು. ಆಸ್ಪತ್ರೆಗೆ ಬರುವ ರೋಗಿಗಳಿಗೆ ಔಷಧವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಲು ಬರೆದು ಮಾಹಿತಿ ನೀಡುವಂತೆ ತಿಳಿಸಲಾಯಿತು.ಕೊರತೆ ಇರುವ ಔಷಧವನ್ನು ಇಲಾಖೆಯಿಂದ ತಕ್ಷಣ ತರಿಸುವಂತೆ ಹೇಳಿದರು. ಆಸ್ಪತ್ರೆಯ ಆವರಣದ ಒಳಗೆ ಖಾಸಗಿ ವಾಹನವನ್ನು ನಿಲ್ಲಿಸುವುದರಿಂದ ತೊಂದರೆ ಆಗುತ್ತಿದೆ ಕೂಡಲೇ ಕ್ರಮ ವಹಿಸುವಂತೆ ತಿಳಿಸಿದರು.
ಒಳರೋಗಿ ಮತ್ತು ಹೊರರೋಗಿಗಳಿಗೆ ಪ್ರತ್ಯೇಕ ಕೌಂಟರ್ ಮಾಡುವಂತೆ ಸಭೆಯಲ್ಲಿ ಸದಸ್ಯರು ತಿಳಿಸಿದರು.ಆಸ್ಪತ್ರೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಬೇಕೆಂದು ತಿಳಿಸಿದರು.


ರಕ್ಷಾ ಸಮಿತಿ ಸದಸ್ಯರಾದ ನವೀನ್ ಗೌಡ ಸವಣಾಲು, ಸೆಬಾಸ್ಟಿಯನ್ ಪಿ.ಟಿ., ವೆಂಕಣ್ಣ ಕೊಯ್ಯೂರು, ವೀರೆಂದ್ರ ಕುಮಾರ್ ಜೈನ್, ಅಬ್ದುಲ್ ರಶೀದ್ ಕಕ್ಕಿಂಜೆ, ಸ್ಟೀವನ್ ಮೋನಿಸ್, ಶ್ರೀಮತಿ ಸವಿತಾ ಸುಲ್ಕೇರಿ, ಆರೋಗ್ಯಾಧಿಕಾರಿ ಕಛೇರಿಯ ಸಿಬ್ಬಂದಿ ಅಜಯ್ ಕಲ್ಲೇಗ ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya

ಕಾಪಿನಡ್ಕ: ರಾಜ್ಯ ಹೆದ್ದಾರಿಯ ಪಕ್ಕದ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ಹಾಗೂ ಊರವರಿಂದ ಬೆಂಕಿ ನಂದಿಸುವ ಕಾರ್ಯ

Suddi Udaya

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

Suddi Udaya

ಉಜಿರೆ ಶ್ರೀ ಜನಾರ್ದನಸ್ವಾಮಿ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya
error: Content is protected !!