25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಶಾಲೆಯ ಪರಿಸರ ಸಂಘ, ಸ್ಕೌಟ್ ಅಂಡ್ ಗೈಡ್ ನ ವಿದ್ಯಾರ್ಥಿಗಳು ಮತ್ತು ಸಂಸ್ಕೃತಿಕ ಸಂಘದ ಸದಸ್ಯರು ಭತ್ತದ ಗದ್ದೆಯಲ್ಲಿ ಸೇರಿ ವಿವಿಧ ಚಟುವಟಿಕೆಗಳನ್ನು ನಡೆಸಿದರು. ಸ್ಕೌಟ್ ಅಂಡ್ ಗೈಡ್, ಪರಿಸರ ಸಂಘ ಮತ್ತು ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳಿಗೆ ಶಾರೀರಿಕ ಚಟುವಟಿಗೆಗೆ ಪ್ರೋತ್ಸಾಹ ನೀಡುವ ಜೊತೆಗೆ, ಮಕ್ಕಳಲ್ಲಿ ತಂಡಭಾವನೆ ಹಾಗೂ ಸ್ನೇಹ ಭಾವ, ಸ್ಪರ್ಧಾತ್ಮಕ ಮನೋಭಾವವೂ ಬೆಳೆಯುವ ಪರಿಸರ ಒದಗಿಸಲಾಗಿತ್ತು.


ಪರಿಸರ ಸಂಘದ ಹಾಗೂ ಸ್ಕೌಟ್ ಹಾಗೂ ಗೈಡ್ ಸದಸ್ಯರು ಗದ್ದೆಯ ಬದುವನ್ನು ಸರಿಪಡಿಸಿ, ಕಲ್ಲು ಹಾಗೂ ಕಸವನ್ನು ತೆಗೆದು, ಮಣ್ಣನ್ನು ಹದಗೊಳಿಸಿ ನಾಟಿಗೆ ಅಣಿಗೊಳಿಸಿದರು.


ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳ ಜೊತೆಗೆ ಪರಿಸರ ಸಂಘದ ಹಾಗೂ ಸ್ಕೌಟ್ ಹಾಗೂ ಗೈಡ್ ವಿದ್ಯಾರ್ಥಿಗಳು ತುಳುನಾಡು ನುಡಿಗೆ ಸಂಬಂಧಿಸಿದ ನೃತ್ಯಗಳನ್ನು ಪ್ರದರ್ಶಿಸಿದರು.ಅಡಿಕೆ ಹಾಳೆಯಲ್ಲಿ ಕುಳಿತು ಕೆಸರಿನಲ್ಲಿ ಎಳೆಯುವ ಆಟ, ಕೆಸರು ಗದ್ದೆ ಓಟ ಇತ್ಯಾದಿ ವಿವಿಧ ವಿನೋದಾವಳಿ ಆಟಗಳನ್ನು ಆಡಿ ವಿದ್ಯಾರ್ಥಿಗಳು ಸಂತಸ ಪಟ್ಟರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ಮೂಡಿಬಂದ ಈ ಕಾರ್ಯಕ್ರಮವನ್ನು ಶಾಲೆಯ ಸ್ಕೌಟ್ ಅಂಡ್ ಗೈಡ್ ಉಸ್ತುವಾರಿ ಶಿಕ್ಷಕರು, ಪರಿಸರ ಸಂಘದ ಶಿಕ್ಷಕರು ಮತ್ತು ಸಾಂಸ್ಕೃತಿಕ ಸಂಘದ ಶಿಕ್ಷಕರು ಸಂಯೋಜಿಸಿ ಯಶಸ್ವಿಯಾಗಿ ನಡೆಸಿಕೊಟ್ಟರು.

Related posts

ಅ.22 : ಉಜಿರೆ ಗ್ರಾ.ಪಂ.ನಲ್ಲಿ ಅಣಬೆ ಬೇಸಾಯದ ತರಬೇತಿ

Suddi Udaya

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

Suddi Udaya

ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿಪಡಿಸುವ ಬಗ್ಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿಯಿಂದ ಮನವಿ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ

Suddi Udaya

ಅಳದಂಗಡಿ: ಪಾದಚಾರಿಗೆ ಕಾರು ಡಿಕ್ಕಿ:

Suddi Udaya

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

Suddi Udaya
error: Content is protected !!