23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಶಾಲೆಯ ಪರಿಸರ ಸಂಘ, ಸ್ಕೌಟ್ ಅಂಡ್ ಗೈಡ್ ನ ವಿದ್ಯಾರ್ಥಿಗಳು ಮತ್ತು ಸಂಸ್ಕೃತಿಕ ಸಂಘದ ಸದಸ್ಯರು ಭತ್ತದ ಗದ್ದೆಯಲ್ಲಿ ಸೇರಿ ವಿವಿಧ ಚಟುವಟಿಕೆಗಳನ್ನು ನಡೆಸಿದರು. ಸ್ಕೌಟ್ ಅಂಡ್ ಗೈಡ್, ಪರಿಸರ ಸಂಘ ಮತ್ತು ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳಿಗೆ ಶಾರೀರಿಕ ಚಟುವಟಿಗೆಗೆ ಪ್ರೋತ್ಸಾಹ ನೀಡುವ ಜೊತೆಗೆ, ಮಕ್ಕಳಲ್ಲಿ ತಂಡಭಾವನೆ ಹಾಗೂ ಸ್ನೇಹ ಭಾವ, ಸ್ಪರ್ಧಾತ್ಮಕ ಮನೋಭಾವವೂ ಬೆಳೆಯುವ ಪರಿಸರ ಒದಗಿಸಲಾಗಿತ್ತು.


ಪರಿಸರ ಸಂಘದ ಹಾಗೂ ಸ್ಕೌಟ್ ಹಾಗೂ ಗೈಡ್ ಸದಸ್ಯರು ಗದ್ದೆಯ ಬದುವನ್ನು ಸರಿಪಡಿಸಿ, ಕಲ್ಲು ಹಾಗೂ ಕಸವನ್ನು ತೆಗೆದು, ಮಣ್ಣನ್ನು ಹದಗೊಳಿಸಿ ನಾಟಿಗೆ ಅಣಿಗೊಳಿಸಿದರು.


ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳ ಜೊತೆಗೆ ಪರಿಸರ ಸಂಘದ ಹಾಗೂ ಸ್ಕೌಟ್ ಹಾಗೂ ಗೈಡ್ ವಿದ್ಯಾರ್ಥಿಗಳು ತುಳುನಾಡು ನುಡಿಗೆ ಸಂಬಂಧಿಸಿದ ನೃತ್ಯಗಳನ್ನು ಪ್ರದರ್ಶಿಸಿದರು.ಅಡಿಕೆ ಹಾಳೆಯಲ್ಲಿ ಕುಳಿತು ಕೆಸರಿನಲ್ಲಿ ಎಳೆಯುವ ಆಟ, ಕೆಸರು ಗದ್ದೆ ಓಟ ಇತ್ಯಾದಿ ವಿವಿಧ ವಿನೋದಾವಳಿ ಆಟಗಳನ್ನು ಆಡಿ ವಿದ್ಯಾರ್ಥಿಗಳು ಸಂತಸ ಪಟ್ಟರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ಮೂಡಿಬಂದ ಈ ಕಾರ್ಯಕ್ರಮವನ್ನು ಶಾಲೆಯ ಸ್ಕೌಟ್ ಅಂಡ್ ಗೈಡ್ ಉಸ್ತುವಾರಿ ಶಿಕ್ಷಕರು, ಪರಿಸರ ಸಂಘದ ಶಿಕ್ಷಕರು ಮತ್ತು ಸಾಂಸ್ಕೃತಿಕ ಸಂಘದ ಶಿಕ್ಷಕರು ಸಂಯೋಜಿಸಿ ಯಶಸ್ವಿಯಾಗಿ ನಡೆಸಿಕೊಟ್ಟರು.

Related posts

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ

Suddi Udaya

ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

Suddi Udaya
error: Content is protected !!