23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ


ಉಜಿರೆ : ಶ್ರೀ ಧರ್ಮಸ್ಥಳ ಮಂಜನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಸಮಾರಂಭವು ಜು. 15 ರಂದು ಕಾಲೇಜಿನ ಸಭಾಂಗಣದಲ್ಲಿ ನೆರೆವೇರಿತು.

ಉದ್ಘಾಟನಾ ಕಾರ್ಯಕ್ರಮವನ್ನು ಎಸ್.ಯನ್.ಯಂ ಪಾಲಿಟೆಕ್ನಿಕ್, ಮೂಡಬಿದಿರೆ ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ರಾಮ್ ಪ್ರಸಾದ್ ಉದ್ಘಾಟಿಸಿ, ಯುವಕ ಯುವತಿಯರಿಗೆ ವ್ಯಕ್ತಿತ್ವ ವಿಕಸನ, ದೇಶಪ್ರೇಮ ಮತ್ತು ಸಹಾಯ ಮನೋಭಾವಕ್ಕೆ ಈ ರೀತಿಯ ಸ್ವಯಂ ಸೇವಾ ಸಂಘಟನೆಗಳು ಅವಶ್ಯಕವಾಗಿದೆ, ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಜೀವನಕ್ಕೆ ಪೂರಕ ಎಂದರು. ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ ಪ್ರಾಸ್ತಾವಿಕ ನುಡಿಗಳನ್ನು ಮಾತನಾಡಿದರು ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಗೌಡ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಸಭಾಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಶುಭಹಾರೈಸಿದರು. ಸಭಾ ಕಾರ್ಯಕ್ರಮವನ್ನು ಸ್ವಯಂ ಸೇವಕಿ ಮಂಜುಷ ಸ್ವಾಗತಿಸಿ, ಅಭಿಜ್ಞಾ ವಂದಿಸಿದಳು. ಸ್ವಯಂ ಸೇವಕಿ ಭವಿತಾ ನಿರೂಪಿಸಿದರು.

Related posts

ಬೆಳ್ತಂಗಡಿ: ಡಯಾಲಿಸಿಸ್ ಕೇಂದ್ರದ ಕೊರತೆಗಳಿಗೆ ಮುಕ್ತಿ : ಆರೋಗ್ಯ ಸಚಿವರು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮತ್ತು ರೋಟರಿ ಸಂಸ್ಥೆಯವರಿಗೆ ಬಂಗೇರರವರಿಂದ ಅಭಿನಂದನೆ

Suddi Udaya

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya

ಹೊಸವರ್ಷಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಬೆಂಗಳೂರಿನ ಭಕ್ತರಿಂದ ಅಲಂಕಾರ ಸೇವೆ

Suddi Udaya
error: Content is protected !!