July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

ಕುವೆಟ್ಟು: ಸ.ಉ.ಹಿ.ಪ್ರಾ. ಶಾಲೆ ಕುವೆಟ್ಟು ಇಲ್ಲಿ ವನಮಹೋತ್ಸವ ಕಾರ್ಯಕ್ರಮ ಶಾಲಾ ಇಕೋ ಕ್ಲಬ್ ಹಾಗೂ ಶಾಂತಿ ಶ್ರೀ ಮಹಿಳಾ ಸಮಾಜ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ಜರಗಿತು. ಶಾಲೆಯ 12 ಮಂದಿ ವಿದ್ಯಾರ್ಥಿಗಳಿಗೆ ಮನೆಯಲ್ಲಿ ಪೋಷಕರೊಂದಿಗೆ ಗಿಡ ನೀಡುವುದಕ್ಕೆ ಸಸಿಗಳನ್ನು ವಿತರಿಸಲಾಯಿತು. ಅಲ್ಲದೆ ಆಗಮಿಸಿದ ಎಲ್ಲಾ ಅತಿಥಿಗಳಿಗೆ ಒಂದೊಂದು ಗಿಡವನ್ನು ವಿತರಿಸಲಾಯಿತು. ಶಾಲಾ ಆವರಣದಲ್ಲಿ ಇಕೋ ಕ್ಲಬ್ ಸದಸ್ಯರು ಹಾಗೂ ಶಾಂತಿ ಶ್ರೀ ಮಹಿಳಾ ಸಮಾಜದ ಸದಸ್ಯರು ಗಿಡಗಳನ್ನು ನೆಟ್ಟರು.

ಕಾರ್ಯಕ್ರಮದಲ್ಲಿ ಶಾಂತಿ ಶ್ರೀ ಮಹಿಳಾ ಸಮಾಜ ಬೆಳ್ತಂಗಡಿ ಅಧ್ಯಕ್ಷರಾದ ಪ್ರೊಫೆಸರ್ ಶ್ರೀಮತಿ ತ್ರಿಶಾಲ್ ಜೈನ್, ಕಾರ್ಯದರ್ಶಿ ಶ್ರೀಮತಿ ರಾಜಶ್ರೀ ಹೆಗ್ಡೆ, ಸದಸ್ಯರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಉಪಾಧ್ಯಕ್ಷೇ ಶ್ರೀಮತಿ ಲಾವಣ್ಯ ಎಸ್ ಶೆಟ್ಟಿ ಮತ್ತು ಸದಸ್ಯರು, ಇಕೋ ಕ್ಲಬ್ ನ ಅಧ್ಯಕ್ಷೆ ಕುಮಾರಿ ರಾಯಿಶ ನಿರ್ವಾಹಕಿ ಶ್ರೀಮತಿ ಪ್ರಮೀಳಾ ಮುಖ್ಯ ಶಿಕ್ಷಕ ಭಾಸ್ಕರ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ. ಶಿಕ್ಷಕಿ ಶ್ರೀಮತಿ ದವಲಾ ಎ, ಕಾರ್ಯಕ್ರಮ ನಿರೂಪಿಸಿದರು.

Related posts

ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಶಾಸಕ ಹರೀಶ್ ಪೂಂಜರಿಂದ ಭರವಸೆ

Suddi Udaya

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೆ ಪದವಿ ಪ್ರದಾನ ಕಾರ್ಯಕ್ರಮ ಮತ್ತು ಮಾತಾ-ಪಿತಾಮಹರ (ಹಿರಿಯರ) ದಿನ ಆಚರಣೆ.

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!