22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮದ ಭಾಗವಾಗಿ ಆಡಳಿತ ಮಂಡಳಿಯು ಅಧಿಕಾರಿಗಳೊಂದಿಗೆ ಪಂಚಾಯತ್ ವ್ಯಾಪ್ತಿಯ ಹಲವು ಅಂಗಡಿ, ಹೋಟೆಲ್, ಪ್ಲ್ಯಾಟ್ ಗಳಲ್ಲಿರುವ ಮನೆಗಳಿಗೆ ಮತ್ತು ವಿವಿಧ ಕಡೆ ಸಂಚರಿಸಿ ಎಲ್ಲೆಂದರಲ್ಲಿ ರಸ್ತೆ ಬದಿ ಮತ್ತು ಇತರ ಜನ ವಸತಿ ಪ್ರದೇಶದಲ್ಲಿ ತ್ಯಾಜ್ಯವನ್ನು ಎಸೆಯುವುದರ ಬಗ್ಗೆ ಜಾಗೃತಿ ಮೂಡಿಸಿ ಒಣ ಕಸವನ್ನು ಬೇರ್ಪಡಿಸಿ ಪಂಚಾಯತ್ ನೀಡಿರುವ ಚೀಲದಲ್ಲಿ ಶೇಖರಿಸಿಟ್ಟು 2 ದಿನಗಳಿಗೊಮ್ಮೆ ಬರುವ ಪಂಚಾಯತ್ ಸ್ವಚ್ಛತಾ ವಾಹನಕ್ಕೆ ಹಸ್ತಾಂತರಿಸುವಂತೆ ಮಾಹಿತಿ ತಿಳಿಸಿ ಪಂಚಾಯತ್ ನೊಂದಿಗೆ ಸಹಕರಿಸುವಂತೆ ವಿನಂತಿಸಿ ಮುಂದೆ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಹಾಕಿದರೆ ಕಾನೂನು ಕ್ರಮ ಮತ್ತು ಸ್ಥಳದಲ್ಲೇ ದಂಡ ವಿಧಿಸುವುದು ಮತ್ತು ಅಂಗಡಿಯವರಾದರೆ ಲೈಸನ್ಸ್ ರದ್ದುಪಡಿಸಿ ಪಂಚಾಯತ್ ನಿಂದ ಕಠಿಣ ಕ್ರಮಕ್ಕೆಗೊಳ್ಳುವುದೆಂಬ ಪ್ರತಿಯೊಬ್ಬರಿಗೂ ಎಚ್ಚರಿಕೆಯ ನೋಟಿಸು ನೀಡಲಾಯಿತು.

ಪಂಚಾಯತ್ ಗೆ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲು ಸಂಪೂರ್ಣ ಸಹಕಾರ ನೀಡಬೇಕೆಂದು ಗೇರುಕಟ್ಟೆ ಸ್ನೇಹ ಸಂಗಮ ಅಟೋ ಚಾಲಕ ಮಾಲಕ ಸಂಘದ ಸದಸ್ಯರಲ್ಲಿ ವಿನಂತಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ದಿವಾಕರ ಎಮ್ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ ಬಿ , ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರುಗಳಾದ ಸುದಾಕರ ಮಜಲು, ಅಬ್ದುಲ್ ಕರೀಮ್, ಮೋಹಿನಿ, ಕುಸುಮಾ ಎನ್ ಬಂಗೇರ, ಲತೀಫ್ ಪರಿಮ, ವಿಜಯ ಗೌಡ, ಹರೀಶ್ ಕುಮಾರ್, ಯಶೋದರ ಶೆಟ್ಟಿ, ಮರೀಟಾ ಪಿಂಟೋ, ಪುಷ್ಪಾ ನಾಳ, ಶ್ವೇತಾ ಕೆ, ಸಿಬ್ಬಂದಿಗಳಾದ ಸುಚಿತ್ರಾ, ಶಶಿಕಲಾ ಎಮ್, ಪ್ರಮೀಳಾ, ನಂದಿನಿ ಪಿ ರೈ, ರವಿ ಎಚ್, ಸುರೇಶ್ ಗೌಡ, ರಂಜಿನಿ, ವಿಮಲ ಹಾಜರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಾಗಾರ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

Suddi Udaya

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!