23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರಿನಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ

ತೆಕ್ಕಾರು: ಬೆಳ್ತಂಗಡಿ ಜಿ.ಪಂ. ತೋಟಗಾರಿಕೆ ಇಲಾಖೆ ತೆಕ್ಕಾರು ಪ್ಯಾಕ್ಸ್ ಹಾಗೂ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2025-26 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮ ಹಾಗೂ ವಿಮಾಯೋಜನೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ಜು.16 ರಂದು ತೆಕ್ಕಾರು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.

ಗ್ರಾ.ಪಂ.ಅಧ್ಯಕ್ಷೆ ರಹಿಯಾನತ್ ಅಧ್ಯಕ್ಷತೆ ವಹಿಸಿದ್ದರು. ತೆಕ್ಕಾರು ಪ್ಯಾಕ್ಸ್ ಅಧ್ಯಕ್ಷ ಬಿ. ಅಬ್ದುಲ್ ರಝಾಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಈ ವರ್ಷದ ಭಾರಿ ಮಳೆಗೆ ಅಡಿಕೆ ಹಾಗೂ ಕಾಲು ಮೆಣಸು ರೋಗದಿಂದ ಬಹಳಷ್ಟು ರೈತರಿಗೆ ನಷ್ಟವಾಗಿದೆ ಇದಕ್ಕೆ ಸರಕಾರ ಸೂಕ್ತವಾದ ಪರಿಹಾರವನ್ನು ನೀಡಬೇಕೆಂದು ಸರಕಾರವನ್ನು ಒತ್ತಾಯಿಸಿದರು.

ವಿಟ್ಲ ಸಿ.ಪಿ.ಸಿ.ಆರ್.ಐ. ವಿಜ್ಞಾನಿ ಡಾ.ಭವಿಷ್ಯ ಮಾಹಿತಿ ನೀಡಿದರು. ಬೆಳ್ತಂಗಡಿ ಜಿ.ಪಂ.ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕೆ.ಎಸ್ ಚಂದ್ರಶೇಖರ್ ಉಪಸ್ಥಿತರಿದ್ದರು. ಪ್ಯಾಕ್ಸ್ ಹಾಗೂ ಗ್ರಾ.ಪಂ. ಉಪಾಧ್ಯಕ್ಷರು, ನಿರ್ದೇಶಕರು, ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ರೈತರು ಉಪಸ್ಥಿತರಿದ್ದರು. ತೋಟಗಾರಿಕಾ ಇಲಾಖೆಯ ಮಹಾವೀರ್, ಕಾರ್ಯನಿರ್ವಾಹಣಾಧಿಕಾರಿ ರಾಘವೇಂದ್ರ ಅಡಪ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮಯ್ಯ ಸಹಕರಿಸಿದರು. ನಿರ್ದೇಶಕ ಇನಾಸ್ ರೋಡಿಗ್ರಸ್ ಸ್ವಾಗತಿಸಿ, ಗ್ರಾ.ಪಂ. ಸಿಬ್ಬಂದಿ ಸಿಹಾಬು ವಂದಿಸಿದರು.

Related posts

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

Suddi Udaya

ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ: ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ

Suddi Udaya

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಡಾ. ಎಸ್.ಎಲ್.ಬೈರಪ್ಪರವರಿಗೆ ನುಡಿನಮನ

Suddi Udaya
error: Content is protected !!