July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರಿನಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ

ತೆಕ್ಕಾರು: ಬೆಳ್ತಂಗಡಿ ಜಿ.ಪಂ. ತೋಟಗಾರಿಕೆ ಇಲಾಖೆ ತೆಕ್ಕಾರು ಪ್ಯಾಕ್ಸ್ ಹಾಗೂ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2025-26 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮ ಹಾಗೂ ವಿಮಾಯೋಜನೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ಜು.16 ರಂದು ತೆಕ್ಕಾರು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.

ಗ್ರಾ.ಪಂ.ಅಧ್ಯಕ್ಷೆ ರಹಿಯಾನತ್ ಅಧ್ಯಕ್ಷತೆ ವಹಿಸಿದ್ದರು. ತೆಕ್ಕಾರು ಪ್ಯಾಕ್ಸ್ ಅಧ್ಯಕ್ಷ ಬಿ. ಅಬ್ದುಲ್ ರಝಾಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಈ ವರ್ಷದ ಭಾರಿ ಮಳೆಗೆ ಅಡಿಕೆ ಹಾಗೂ ಕಾಲು ಮೆಣಸು ರೋಗದಿಂದ ಬಹಳಷ್ಟು ರೈತರಿಗೆ ನಷ್ಟವಾಗಿದೆ ಇದಕ್ಕೆ ಸರಕಾರ ಸೂಕ್ತವಾದ ಪರಿಹಾರವನ್ನು ನೀಡಬೇಕೆಂದು ಸರಕಾರವನ್ನು ಒತ್ತಾಯಿಸಿದರು.

ವಿಟ್ಲ ಸಿ.ಪಿ.ಸಿ.ಆರ್.ಐ. ವಿಜ್ಞಾನಿ ಡಾ.ಭವಿಷ್ಯ ಮಾಹಿತಿ ನೀಡಿದರು. ಬೆಳ್ತಂಗಡಿ ಜಿ.ಪಂ.ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕೆ.ಎಸ್ ಚಂದ್ರಶೇಖರ್ ಉಪಸ್ಥಿತರಿದ್ದರು. ಪ್ಯಾಕ್ಸ್ ಹಾಗೂ ಗ್ರಾ.ಪಂ. ಉಪಾಧ್ಯಕ್ಷರು, ನಿರ್ದೇಶಕರು, ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ರೈತರು ಉಪಸ್ಥಿತರಿದ್ದರು. ತೋಟಗಾರಿಕಾ ಇಲಾಖೆಯ ಮಹಾವೀರ್, ಕಾರ್ಯನಿರ್ವಾಹಣಾಧಿಕಾರಿ ರಾಘವೇಂದ್ರ ಅಡಪ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮಯ್ಯ ಸಹಕರಿಸಿದರು. ನಿರ್ದೇಶಕ ಇನಾಸ್ ರೋಡಿಗ್ರಸ್ ಸ್ವಾಗತಿಸಿ, ಗ್ರಾ.ಪಂ. ಸಿಬ್ಬಂದಿ ಸಿಹಾಬು ವಂದಿಸಿದರು.

Related posts

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

Suddi Udaya

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya
error: Content is protected !!