25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಸರಕಾರಿ ಪ್ರೌಢ ಶಾಲಾ ಮಂತ್ರಿ ಮಂಡಲ ರಚನೆ

ನಾವೂರು: ಸರಕಾರಿ ಪ್ರೌಢ ಶಾಲಾ ಮಕ್ಕಳ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಇತ್ತೀಚೆಗೆ ಜರಗಿತು.
ಕಾರ್ಯಕ್ರಮವನ್ನು ನಾವೂರಿನ ಪ್ರಸಿದ್ಧ ವೈದ್ಯ ಡಾ| ಪ್ರದೀಪ್‌ರವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿ ಶಿಸ್ತು ಮತ್ತು ಉತ್ತಮ ನಾಯಕತ್ವ ಮತ್ತು ಪ್ರಾಮಾಣಿಕವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಲು ವಿದ್ಯಾರ್ಥಿಗಳಿಗೆ ತಿಳಿಸಿ ಶುಭ ಹಾರೈಸಿದರು.


ಹೊಸದಾಗಿ ಆಯ್ಕೆಯಾದ ಶಾಲಾ ವಿದ್ಯಾರ್ಥಿಗಳ ನಾಯಕ ವಿಖ್ಯಾತ್ ೧೦ನೇ ತರಗತಿ, ಉಪನಾಯಕ ಮುಹಮ್ಮದ್ ಮುಬಶೀರ್ ಶಾಕ್ಮಲ್ ೯ನೇ ತರಗತಿ ಹಾಗೂ ಮಂತ್ರಿ ಮಂಡಲದ ಸದಸ್ಯರು ಪ್ರಮಾಣವಚನವನ್ನು ಸ್ವೀಕರಿಸಿದರು. ಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಎಂ. ಪ್ರತಿಜ್ಞೆಯನ್ನು ಬೋಧಿಸಿದರು.


ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್.ಸಿ ಉಪಾಧ್ಯಕ್ಷ ಉಮೇಶ್ ಪ್ರಭು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಇಸ್ಮಾಯಿಲ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯದ ದೃತಿ ೮ನೇ ತರಗತಿ ಕಾರ್ಯಕ್ರಮ ನಿರೂಪಿಸಿ, ತನುಶ್ರೀ ೯ನೇ ಸ್ವಾಗತಿಸಿ, ಶಾಲಾ ಉಪನಾಯಕ ಧನ್ಯವಾದವಿತ್ತರು.

Related posts

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ಮೇ.15 ರಿಂದ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ. 50% ಡಿಸ್ಕೌಂಟ್ ಸೇಲ್: ಸೀರೆಗಳು ಕೇವಲ ರೂ. 99 ಕ್ಕೆ ಲಭ್ಯ

Suddi Udaya

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

Suddi Udaya
error: Content is protected !!