23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

ಬೆಳ್ತಂಗಡಿ :ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆ ಜು. 15 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು.

ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ಭೇಟಿ ನೀಡಿ ಪಕ್ಷದ ಚಟುವಟಿಕೆ, ಕಾರ್ಯ ಯೋಜನೆ, ಬಗ್ಗೆ ಮಾಹಿತಿ ನೀಡಿದರು. ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಹಾಗೂ ಯುವಮೋರ್ಚಾ ಪ್ರಭಾರಿ ಪ್ರಶಾಂತ್ ಪಾರೆಂಕಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಸಂದರ್ಭೋಚಿತವಾಗಿ ಮಾತನಾಡಿದರು. ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಮಂಡಲ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ, ಹಾಗೂ ಮಂಡಲ ಯುವಮೋರ್ಚಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ ಸ್ವಾಗತಿಸಿ, ಉಪಾಧ್ಯಕ್ಷರ ಗಣೇಶ್ ಲಾಯಿಲ ಧನ್ಯವಾದವಿತ್ತರು.

Related posts

ಶ್ರೀ ಕ್ಷೇತ್ರ ಸೌತಡ್ಕಕ್ಕೆ ನಟಿ ರಚಿತಾ ರಾಮ್ ಭೇಟಿ

Suddi Udaya

ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ ಐಟಿ ವಿಚಾರಣೆಗೆ ಹಾಜರು

Suddi Udaya

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

Suddi Udaya

ಮುಂಡ್ರಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ 25 ನಲಿ ಕಲಿ ಕುರ್ಚಿ ಕೊಡುಗೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿಯ ಶಶಿಕಾಂತ್ ರವರ ವಿಶೇಷ ಸಾಧನೆ: ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

Suddi Udaya
error: Content is protected !!