25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರಿನಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ

ತೆಕ್ಕಾರು: ಬೆಳ್ತಂಗಡಿ ಜಿ.ಪಂ. ತೋಟಗಾರಿಕೆ ಇಲಾಖೆ ತೆಕ್ಕಾರು ಪ್ಯಾಕ್ಸ್ ಹಾಗೂ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2025-26 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮ ಹಾಗೂ ವಿಮಾಯೋಜನೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ಜು.16 ರಂದು ತೆಕ್ಕಾರು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.

ಗ್ರಾ.ಪಂ.ಅಧ್ಯಕ್ಷೆ ರಹಿಯಾನತ್ ಅಧ್ಯಕ್ಷತೆ ವಹಿಸಿದ್ದರು. ತೆಕ್ಕಾರು ಪ್ಯಾಕ್ಸ್ ಅಧ್ಯಕ್ಷ ಬಿ. ಅಬ್ದುಲ್ ರಝಾಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಈ ವರ್ಷದ ಭಾರಿ ಮಳೆಗೆ ಅಡಿಕೆ ಹಾಗೂ ಕಾಲು ಮೆಣಸು ರೋಗದಿಂದ ಬಹಳಷ್ಟು ರೈತರಿಗೆ ನಷ್ಟವಾಗಿದೆ ಇದಕ್ಕೆ ಸರಕಾರ ಸೂಕ್ತವಾದ ಪರಿಹಾರವನ್ನು ನೀಡಬೇಕೆಂದು ಸರಕಾರವನ್ನು ಒತ್ತಾಯಿಸಿದರು.

ವಿಟ್ಲ ಸಿ.ಪಿ.ಸಿ.ಆರ್.ಐ. ವಿಜ್ಞಾನಿ ಡಾ.ಭವಿಷ್ಯ ಮಾಹಿತಿ ನೀಡಿದರು. ಬೆಳ್ತಂಗಡಿ ಜಿ.ಪಂ.ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕೆ.ಎಸ್ ಚಂದ್ರಶೇಖರ್ ಉಪಸ್ಥಿತರಿದ್ದರು. ಪ್ಯಾಕ್ಸ್ ಹಾಗೂ ಗ್ರಾ.ಪಂ. ಉಪಾಧ್ಯಕ್ಷರು, ನಿರ್ದೇಶಕರು, ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ರೈತರು ಉಪಸ್ಥಿತರಿದ್ದರು. ತೋಟಗಾರಿಕಾ ಇಲಾಖೆಯ ಮಹಾವೀರ್, ಕಾರ್ಯನಿರ್ವಾಹಣಾಧಿಕಾರಿ ರಾಘವೇಂದ್ರ ಅಡಪ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮಯ್ಯ ಸಹಕರಿಸಿದರು. ನಿರ್ದೇಶಕ ಇನಾಸ್ ರೋಡಿಗ್ರಸ್ ಸ್ವಾಗತಿಸಿ, ಗ್ರಾ.ಪಂ. ಸಿಬ್ಬಂದಿ ಸಿಹಾಬು ವಂದಿಸಿದರು.

Related posts

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸೌರ ಯುಗಾದಿ ವಿಷು ಆಚರಣೆ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya
error: Content is protected !!