32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಶವ ಹೂತು ಹಾಕಿದ ದೂರು ಪ್ರಕರಣ: ಎಸ್ ಐಟಿ ರಚನೆಗೆ ಮುಖ್ಯ ಮಂತ್ರಿಗಳಿಗೆ ಮನವಿ

ಬೆಂಗಳೂರು: ಹಿರಿಯ ವಕೀಲರಾದ ಬಾಲನ್ ಮತ್ತು ಸಿ.ಎಸ್.ದ್ವಾರಕನಾಥ್ ಅವರ ನೇತೃತ್ವದ ವಕೀಲರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧರ್ಮಸ್ಥಳ ಪ್ರಕರಣದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಮುಖ್ಯಮಂತ್ರಿ ಯವರ ಆಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ವಕೀಲರ ನಿಯೋಗವು ಈ ಸಂಬಂಧ ಮನವಿಯನ್ನು ಸಲ್ಲಿಸಿದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಾ.ಸಿ.ಎಸ್‌. ದ್ವಾರಕಾನಾಥ್ ಅವರು, “ಇವತ್ತು ಮುಖ್ಯಮಂತ್ರಿಗಳನ್ನ ಭೇಟಿ ಮಾಡಿ, ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದಂತಹ ಅತ್ಯಾಚಾರ, ಹತ್ಯೆ ಮತ್ತು ಹೆಣಗಳನ್ನು ಹೂತು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದೇವೆ.

ಈಗಾಗಲೇ ಅಲ್ಲಿ ತನಿಖೆ ನಡೆಯುತ್ತಿದ್ದು ಒಬ್ಬರು ದೂರು ಕೂಡ ನೀಡಿದ್ದಾರೆ. ಆ ವ್ಯಕ್ತಿಗೆ ಸೂಕ್ತ ರಕ್ಷಣೆ ನೀಡಬೇಕಾಗಿದೆ. ಅಲ್ಲದೆ, ಆ ವ್ಯಕ್ತಿ ಹೇಳುವ ಜಾಗದಲ್ಲಿ ಪರಿಶೀಲನೆ ನಡೆಸಬೇಕಾಗುತ್ತದೆ. ಹೀಗಾಗಿ ಈ ಪ್ರಕರಣವನ್ನು ಎಸ್‌ಐಟಿಗೆ ನೀಡಬೇಕು ಎಂದು ಮನವಿ ಮಾಡಿದ್ದೇವೆ” ಎಂದು ತಿಳಿಸಿದರು.

Related posts

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya
error: Content is protected !!