32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮದ ಭಾಗವಾಗಿ ಆಡಳಿತ ಮಂಡಳಿಯು ಅಧಿಕಾರಿಗಳೊಂದಿಗೆ ಪಂಚಾಯತ್ ವ್ಯಾಪ್ತಿಯ ಹಲವು ಅಂಗಡಿ, ಹೋಟೆಲ್, ಪ್ಲ್ಯಾಟ್ ಗಳಲ್ಲಿರುವ ಮನೆಗಳಿಗೆ ಮತ್ತು ವಿವಿಧ ಕಡೆ ಸಂಚರಿಸಿ ಎಲ್ಲೆಂದರಲ್ಲಿ ರಸ್ತೆ ಬದಿ ಮತ್ತು ಇತರ ಜನ ವಸತಿ ಪ್ರದೇಶದಲ್ಲಿ ತ್ಯಾಜ್ಯವನ್ನು ಎಸೆಯುವುದರ ಬಗ್ಗೆ ಜಾಗೃತಿ ಮೂಡಿಸಿ ಒಣ ಕಸವನ್ನು ಬೇರ್ಪಡಿಸಿ ಪಂಚಾಯತ್ ನೀಡಿರುವ ಚೀಲದಲ್ಲಿ ಶೇಖರಿಸಿಟ್ಟು 2 ದಿನಗಳಿಗೊಮ್ಮೆ ಬರುವ ಪಂಚಾಯತ್ ಸ್ವಚ್ಛತಾ ವಾಹನಕ್ಕೆ ಹಸ್ತಾಂತರಿಸುವಂತೆ ಮಾಹಿತಿ ತಿಳಿಸಿ ಪಂಚಾಯತ್ ನೊಂದಿಗೆ ಸಹಕರಿಸುವಂತೆ ವಿನಂತಿಸಿ ಮುಂದೆ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಹಾಕಿದರೆ ಕಾನೂನು ಕ್ರಮ ಮತ್ತು ಸ್ಥಳದಲ್ಲೇ ದಂಡ ವಿಧಿಸುವುದು ಮತ್ತು ಅಂಗಡಿಯವರಾದರೆ ಲೈಸನ್ಸ್ ರದ್ದುಪಡಿಸಿ ಪಂಚಾಯತ್ ನಿಂದ ಕಠಿಣ ಕ್ರಮಕ್ಕೆಗೊಳ್ಳುವುದೆಂಬ ಪ್ರತಿಯೊಬ್ಬರಿಗೂ ಎಚ್ಚರಿಕೆಯ ನೋಟಿಸು ನೀಡಲಾಯಿತು.

ಪಂಚಾಯತ್ ಗೆ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲು ಸಂಪೂರ್ಣ ಸಹಕಾರ ನೀಡಬೇಕೆಂದು ಗೇರುಕಟ್ಟೆ ಸ್ನೇಹ ಸಂಗಮ ಅಟೋ ಚಾಲಕ ಮಾಲಕ ಸಂಘದ ಸದಸ್ಯರಲ್ಲಿ ವಿನಂತಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ದಿವಾಕರ ಎಮ್ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ ಬಿ , ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರುಗಳಾದ ಸುದಾಕರ ಮಜಲು, ಅಬ್ದುಲ್ ಕರೀಮ್, ಮೋಹಿನಿ, ಕುಸುಮಾ ಎನ್ ಬಂಗೇರ, ಲತೀಫ್ ಪರಿಮ, ವಿಜಯ ಗೌಡ, ಹರೀಶ್ ಕುಮಾರ್, ಯಶೋದರ ಶೆಟ್ಟಿ, ಮರೀಟಾ ಪಿಂಟೋ, ಪುಷ್ಪಾ ನಾಳ, ಶ್ವೇತಾ ಕೆ, ಸಿಬ್ಬಂದಿಗಳಾದ ಸುಚಿತ್ರಾ, ಶಶಿಕಲಾ ಎಮ್, ಪ್ರಮೀಳಾ, ನಂದಿನಿ ಪಿ ರೈ, ರವಿ ಎಚ್, ಸುರೇಶ್ ಗೌಡ, ರಂಜಿನಿ, ವಿಮಲ ಹಾಜರಿದ್ದರು.

Related posts

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya

ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya
error: Content is protected !!