25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮದ ಭಾಗವಾಗಿ ಆಡಳಿತ ಮಂಡಳಿಯು ಅಧಿಕಾರಿಗಳೊಂದಿಗೆ ಪಂಚಾಯತ್ ವ್ಯಾಪ್ತಿಯ ಹಲವು ಅಂಗಡಿ, ಹೋಟೆಲ್, ಪ್ಲ್ಯಾಟ್ ಗಳಲ್ಲಿರುವ ಮನೆಗಳಿಗೆ ಮತ್ತು ವಿವಿಧ ಕಡೆ ಸಂಚರಿಸಿ ಎಲ್ಲೆಂದರಲ್ಲಿ ರಸ್ತೆ ಬದಿ ಮತ್ತು ಇತರ ಜನ ವಸತಿ ಪ್ರದೇಶದಲ್ಲಿ ತ್ಯಾಜ್ಯವನ್ನು ಎಸೆಯುವುದರ ಬಗ್ಗೆ ಜಾಗೃತಿ ಮೂಡಿಸಿ ಒಣ ಕಸವನ್ನು ಬೇರ್ಪಡಿಸಿ ಪಂಚಾಯತ್ ನೀಡಿರುವ ಚೀಲದಲ್ಲಿ ಶೇಖರಿಸಿಟ್ಟು 2 ದಿನಗಳಿಗೊಮ್ಮೆ ಬರುವ ಪಂಚಾಯತ್ ಸ್ವಚ್ಛತಾ ವಾಹನಕ್ಕೆ ಹಸ್ತಾಂತರಿಸುವಂತೆ ಮಾಹಿತಿ ತಿಳಿಸಿ ಪಂಚಾಯತ್ ನೊಂದಿಗೆ ಸಹಕರಿಸುವಂತೆ ವಿನಂತಿಸಿ ಮುಂದೆ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಹಾಕಿದರೆ ಕಾನೂನು ಕ್ರಮ ಮತ್ತು ಸ್ಥಳದಲ್ಲೇ ದಂಡ ವಿಧಿಸುವುದು ಮತ್ತು ಅಂಗಡಿಯವರಾದರೆ ಲೈಸನ್ಸ್ ರದ್ದುಪಡಿಸಿ ಪಂಚಾಯತ್ ನಿಂದ ಕಠಿಣ ಕ್ರಮಕ್ಕೆಗೊಳ್ಳುವುದೆಂಬ ಪ್ರತಿಯೊಬ್ಬರಿಗೂ ಎಚ್ಚರಿಕೆಯ ನೋಟಿಸು ನೀಡಲಾಯಿತು.

ಪಂಚಾಯತ್ ಗೆ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲು ಸಂಪೂರ್ಣ ಸಹಕಾರ ನೀಡಬೇಕೆಂದು ಗೇರುಕಟ್ಟೆ ಸ್ನೇಹ ಸಂಗಮ ಅಟೋ ಚಾಲಕ ಮಾಲಕ ಸಂಘದ ಸದಸ್ಯರಲ್ಲಿ ವಿನಂತಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ದಿವಾಕರ ಎಮ್ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ ಬಿ , ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರುಗಳಾದ ಸುದಾಕರ ಮಜಲು, ಅಬ್ದುಲ್ ಕರೀಮ್, ಮೋಹಿನಿ, ಕುಸುಮಾ ಎನ್ ಬಂಗೇರ, ಲತೀಫ್ ಪರಿಮ, ವಿಜಯ ಗೌಡ, ಹರೀಶ್ ಕುಮಾರ್, ಯಶೋದರ ಶೆಟ್ಟಿ, ಮರೀಟಾ ಪಿಂಟೋ, ಪುಷ್ಪಾ ನಾಳ, ಶ್ವೇತಾ ಕೆ, ಸಿಬ್ಬಂದಿಗಳಾದ ಸುಚಿತ್ರಾ, ಶಶಿಕಲಾ ಎಮ್, ಪ್ರಮೀಳಾ, ನಂದಿನಿ ಪಿ ರೈ, ರವಿ ಎಚ್, ಸುರೇಶ್ ಗೌಡ, ರಂಜಿನಿ, ವಿಮಲ ಹಾಜರಿದ್ದರು.

Related posts

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ ನಿಧನ

Suddi Udaya

ನಿಷೇದಿತ ಮಾದಕವಸ್ತು ಮಾರಾಟ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ

Suddi Udaya
error: Content is protected !!