23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಶವ ಹೂತು ಹಾಕಿದ ದೂರು ಪ್ರಕರಣ: ಎಸ್ ಐಟಿ ರಚನೆಗೆ ಮುಖ್ಯ ಮಂತ್ರಿಗಳಿಗೆ ಮನವಿ

ಬೆಂಗಳೂರು: ಹಿರಿಯ ವಕೀಲರಾದ ಬಾಲನ್ ಮತ್ತು ಸಿ.ಎಸ್.ದ್ವಾರಕನಾಥ್ ಅವರ ನೇತೃತ್ವದ ವಕೀಲರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧರ್ಮಸ್ಥಳ ಪ್ರಕರಣದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಮುಖ್ಯಮಂತ್ರಿ ಯವರ ಆಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ವಕೀಲರ ನಿಯೋಗವು ಈ ಸಂಬಂಧ ಮನವಿಯನ್ನು ಸಲ್ಲಿಸಿದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಾ.ಸಿ.ಎಸ್‌. ದ್ವಾರಕಾನಾಥ್ ಅವರು, “ಇವತ್ತು ಮುಖ್ಯಮಂತ್ರಿಗಳನ್ನ ಭೇಟಿ ಮಾಡಿ, ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದಂತಹ ಅತ್ಯಾಚಾರ, ಹತ್ಯೆ ಮತ್ತು ಹೆಣಗಳನ್ನು ಹೂತು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದೇವೆ.

ಈಗಾಗಲೇ ಅಲ್ಲಿ ತನಿಖೆ ನಡೆಯುತ್ತಿದ್ದು ಒಬ್ಬರು ದೂರು ಕೂಡ ನೀಡಿದ್ದಾರೆ. ಆ ವ್ಯಕ್ತಿಗೆ ಸೂಕ್ತ ರಕ್ಷಣೆ ನೀಡಬೇಕಾಗಿದೆ. ಅಲ್ಲದೆ, ಆ ವ್ಯಕ್ತಿ ಹೇಳುವ ಜಾಗದಲ್ಲಿ ಪರಿಶೀಲನೆ ನಡೆಸಬೇಕಾಗುತ್ತದೆ. ಹೀಗಾಗಿ ಈ ಪ್ರಕರಣವನ್ನು ಎಸ್‌ಐಟಿಗೆ ನೀಡಬೇಕು ಎಂದು ಮನವಿ ಮಾಡಿದ್ದೇವೆ” ಎಂದು ತಿಳಿಸಿದರು.

Related posts

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

Suddi Udaya

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya
error: Content is protected !!