30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ : ಹರೀಶ್ ಪೂಂಜ ಆಕ್ರೋಶ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕೊಕ್ಕಡ ಬಳಿಯ ಸೌತಡ್ಕದಲ್ಲಿ ಇಂದು ಬೆಳಿಗ್ಗೆ 2 ಕಾಡಾನೆಗಳು ದಿಢೀರ್ ಪ್ರತ್ಯಕ್ಷವಾಗಿ ಸ್ಥಳೀಯ ನಿವಾಸಿ ಬಾಲಕೃಷ್ಣ ಶೆಟ್ಟಿಯವರನ್ನು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಅವರು ಮೃತಪಟ್ಟ ಘಟನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀವ್ರ ದುಃಖ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕೃಷಿ ಚಟುವಟಿಕೆಗಳಿಗೆ ಕಾಡಾನೆಗಳು ದಾಳಿ ನಡೆಸಿ ಹಾನಿ ಮಾಡುತ್ತಿರುವ ಬಗ್ಗೆ ತಾನು ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದಿದ್ದರೂ ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಶಾಸಕರು ಸಂತ್ರಸ್ತ ಕೃಷಿಕರ ನೋವನ್ನು ಅಂದು ಸದನದಲ್ಲಿ ತಾನು ವ್ಯಕ್ತಪಡಿಸಿರುವುದನ್ನು ಬೆಳ್ತಂಗಡಿ ಕಾಂಗ್ರೆಸ್ ಗರು ಅಪಹಾಸ್ಯ ಮಾಡಿದ್ದರು. ಆದರೆ ಇದರ ಗಂಭೀರತೆಗೆ ಓರ್ವ ನಾಗರೀಕನನ್ನು ಕಳೆದುಕೊಂಡದ್ದು ತನಗೆ ಅತೀವ ನೋವನ್ನುಂಟು ಮಾಡಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತು ಆನೆ ದಾಳಿ ಮಾಡುವ ಕೃಷಿ ಪ್ರದೇಶ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಸೂಕ್ತ ತಡೆಬೇಲಿ ನಿರ್ಮಾಣ ಮಾಡಲು ಕ್ರಮ ಕೈಗೊಂಡು ಮೃತ ಬಾಲಕೃಷ್ಣ ಶೆಟ್ಟಿಯವರ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರ ಬಿಡುಗಡೆ ಮಾಡುವಂತೆ ಪತ್ರಿಕಾ ಪ್ರಕಟಣೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗೈಡ್ ಸಂಸ್ಥಾಪಕರ ದಿನ ಹಾಗೂ ದ್ವಜ ದಿನಾಚರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ದಂಪತಿ ಪಾಕ ಸ್ಪರ್ಧೆ ಮತ್ತು ದೀಪಾವಳಿ ಆಚರಣೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದ ದುರ್ಘಟನೆ ವಿದ್ಯುತ್ ತಂತಿ ಸ್ಪರ್ಶಿಸಿ ವೀರಪ್ಪ ಎಂಬವರು ಮೃತ್ಯು

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!