ಕೊಕ್ಕಡ: ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆ ತಿವಿದು ಬಾಲಕೃಷ್ಣ ಶೆಟ್ಟಿ ಎಂಬವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಕುಟುಂಬಕ್ಕೆ ಸರಕಾರ ಹಾಗೂ ಇಲಾಖೆ ಗರಿಷ್ಠ ಮೊತ್ತ ಪರಿಹಾರ ನೀಡಬೇಕು ಎಂದು ಉದ್ಯಮಿ ಹಾಗೂ ಕೃಷಿಕ ಗಣೇಶ್ ಕಲಾಯಿ ರವರು ಸರಕಾರ ಹಾಗೂ ಇಲಾಖೆಗೆ ಒತ್ತಾಯಿಸಿದ್ದಾರೆ.
ಕಳೆದ 5/6 ವರ್ಷಗಳಿಂದ ಕೊಕ್ಕಡ ಹಾಗೂ ಸುತ್ತ ಮುತ್ತ ಪರಿಸರದಲ್ಲಿ ಕಾಡಾನೆಗಳ ಸಂಚಾರ ಅತಿಯಾಗಿದ್ದು, ಕಳೆದ ವರ್ಷ ರಾಜ್ಯ ಅರಣ್ಯ ಇಲಾಖೆಗೂ ಪತ್ರದ ಮುಖಾಂತರ ತಿಳಿಸಲಾಗಿದೆ, ಆದರೆ ಇಲ್ಲಿಯವರೆಗೆ ಸಂಬಂಧಪಟ್ಟ ಇಲಾಖೆ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿಲ್ಲ. ಇವತ್ತು ಒಂದು ಪ್ರಾಣ ಹಾನಿ ಆಗಿದೆ. ಇದಕ್ಕೆ ಇಲಾಖೆ ನೇರ ಕಾರಣ, ಇಲ್ಲಿನ ಪರಿಸರದ ಕೃಷಿಗಳಿಗೆ ಅದೆಷ್ಟೋ ಹಾನಿ ಆಗಿದೆ, ಮುಂದೆ ಇಂತಹ ಘಟನೆಗಳು ಸಂಭವಿಸದಂತೆ ಆಗಬೇಕಾದರೆ ರಿಸರ್ವ್ ಫಾರೆಸ್ಟ್ ಗಳ ಸುತ್ತ ಆನೆ ಕಂದಕ (EPT) ರಚನೆ ಮಾಡಬೇಕಾಗುತ್ತದೆ. ಇದರ ಬಗ್ಗೆ ಇಲಾಖೆ ಬೇಗನೆ ಕ್ರಮ ಕೈಗೊಳ್ಳಬೇಕು. ಇದರಿಂದ ಆನೆ ಗಳು ನಾಡಿಗೆ ಬರುವುದನ್ನು ತಪ್ಪಿಸಬಹುದು ಎಂದು ತಿಳಿಸಿರುತ್ತಾರೆ.











