23.5 C
ಪುತ್ತೂರು, ಬೆಳ್ತಂಗಡಿ
June 8, 2026
ರಾಜ್ಯ ಸುದ್ದಿವರದಿಸಮಸ್ಯೆಸರ್ಕಾರಿ ಇಲಾಖಾ ಸುದ್ದಿ

ಕಾಡಾನೆ ದಾಳಿ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಮೊತ್ತ ಪರಿಹಾರ ನೀಡಲು ಉದ್ಯಮಿ ಗಣೇಶ್ ಕಲಾಯಿ ಒತ್ತಾಯ

ಕೊಕ್ಕಡ: ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆ ತಿವಿದು ಬಾಲಕೃಷ್ಣ ಶೆಟ್ಟಿ ಎಂಬವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಕುಟುಂಬಕ್ಕೆ ಸರಕಾರ ಹಾಗೂ ಇಲಾಖೆ ಗರಿಷ್ಠ ಮೊತ್ತ ಪರಿಹಾರ ನೀಡಬೇಕು ಎಂದು ಉದ್ಯಮಿ ಹಾಗೂ ಕೃಷಿಕ ಗಣೇಶ್ ಕಲಾಯಿ ರವರು ಸರಕಾರ ಹಾಗೂ ಇಲಾಖೆಗೆ ಒತ್ತಾಯಿಸಿದ್ದಾರೆ.

ಕಳೆದ 5/6 ವರ್ಷಗಳಿಂದ ಕೊಕ್ಕಡ ಹಾಗೂ ಸುತ್ತ ಮುತ್ತ ಪರಿಸರದಲ್ಲಿ ಕಾಡಾನೆಗಳ ಸಂಚಾರ ಅತಿಯಾಗಿದ್ದು, ಕಳೆದ ವರ್ಷ ರಾಜ್ಯ ಅರಣ್ಯ ಇಲಾಖೆಗೂ ಪತ್ರದ ಮುಖಾಂತರ ತಿಳಿಸಲಾಗಿದೆ, ಆದರೆ ಇಲ್ಲಿಯವರೆಗೆ ಸಂಬಂಧಪಟ್ಟ ಇಲಾಖೆ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿಲ್ಲ. ಇವತ್ತು ಒಂದು ಪ್ರಾಣ ಹಾನಿ ಆಗಿದೆ. ಇದಕ್ಕೆ ಇಲಾಖೆ ನೇರ ಕಾರಣ, ಇಲ್ಲಿನ ಪರಿಸರದ ಕೃಷಿಗಳಿಗೆ ಅದೆಷ್ಟೋ ಹಾನಿ ಆಗಿದೆ, ಮುಂದೆ ಇಂತಹ ಘಟನೆಗಳು ಸಂಭವಿಸದಂತೆ ಆಗಬೇಕಾದರೆ ರಿಸರ್ವ್ ಫಾರೆಸ್ಟ್ ಗಳ ಸುತ್ತ ಆನೆ ಕಂದಕ (EPT) ರಚನೆ ಮಾಡಬೇಕಾಗುತ್ತದೆ. ಇದರ ಬಗ್ಗೆ ಇಲಾಖೆ ಬೇಗನೆ ಕ್ರಮ ಕೈಗೊಳ್ಳಬೇಕು. ಇದರಿಂದ ಆನೆ ಗಳು ನಾಡಿಗೆ ಬರುವುದನ್ನು ತಪ್ಪಿಸಬಹುದು ಎಂದು ತಿಳಿಸಿರುತ್ತಾರೆ.

Related posts

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಳಿಯ ಗ್ರಾ.ಪಂ. ನಿಂದ ಯಶಸ್ವಿ ಮಾದರಿ ಜನ ಸ್ನೇಹಿ ಆಧಾರ್ ಕ್ಯಾಂಪ್ & ಅಂಚೆ ಜನ ಸಂಪರ್ಕ ಅಭಿಯಾನ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!