23.7 C
ಪುತ್ತೂರು, ಬೆಳ್ತಂಗಡಿ
April 24, 2026
ರಾಜ್ಯ ಸುದ್ದಿವರದಿಸಮಸ್ಯೆಸರ್ಕಾರಿ ಇಲಾಖಾ ಸುದ್ದಿ

ಕಾಡಾನೆ ದಾಳಿ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಮೊತ್ತ ಪರಿಹಾರ ನೀಡಲು ಉದ್ಯಮಿ ಗಣೇಶ್ ಕಲಾಯಿ ಒತ್ತಾಯ

ಕೊಕ್ಕಡ: ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆ ತಿವಿದು ಬಾಲಕೃಷ್ಣ ಶೆಟ್ಟಿ ಎಂಬವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಕುಟುಂಬಕ್ಕೆ ಸರಕಾರ ಹಾಗೂ ಇಲಾಖೆ ಗರಿಷ್ಠ ಮೊತ್ತ ಪರಿಹಾರ ನೀಡಬೇಕು ಎಂದು ಉದ್ಯಮಿ ಹಾಗೂ ಕೃಷಿಕ ಗಣೇಶ್ ಕಲಾಯಿ ರವರು ಸರಕಾರ ಹಾಗೂ ಇಲಾಖೆಗೆ ಒತ್ತಾಯಿಸಿದ್ದಾರೆ.

ಕಳೆದ 5/6 ವರ್ಷಗಳಿಂದ ಕೊಕ್ಕಡ ಹಾಗೂ ಸುತ್ತ ಮುತ್ತ ಪರಿಸರದಲ್ಲಿ ಕಾಡಾನೆಗಳ ಸಂಚಾರ ಅತಿಯಾಗಿದ್ದು, ಕಳೆದ ವರ್ಷ ರಾಜ್ಯ ಅರಣ್ಯ ಇಲಾಖೆಗೂ ಪತ್ರದ ಮುಖಾಂತರ ತಿಳಿಸಲಾಗಿದೆ, ಆದರೆ ಇಲ್ಲಿಯವರೆಗೆ ಸಂಬಂಧಪಟ್ಟ ಇಲಾಖೆ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿಲ್ಲ. ಇವತ್ತು ಒಂದು ಪ್ರಾಣ ಹಾನಿ ಆಗಿದೆ. ಇದಕ್ಕೆ ಇಲಾಖೆ ನೇರ ಕಾರಣ, ಇಲ್ಲಿನ ಪರಿಸರದ ಕೃಷಿಗಳಿಗೆ ಅದೆಷ್ಟೋ ಹಾನಿ ಆಗಿದೆ, ಮುಂದೆ ಇಂತಹ ಘಟನೆಗಳು ಸಂಭವಿಸದಂತೆ ಆಗಬೇಕಾದರೆ ರಿಸರ್ವ್ ಫಾರೆಸ್ಟ್ ಗಳ ಸುತ್ತ ಆನೆ ಕಂದಕ (EPT) ರಚನೆ ಮಾಡಬೇಕಾಗುತ್ತದೆ. ಇದರ ಬಗ್ಗೆ ಇಲಾಖೆ ಬೇಗನೆ ಕ್ರಮ ಕೈಗೊಳ್ಳಬೇಕು. ಇದರಿಂದ ಆನೆ ಗಳು ನಾಡಿಗೆ ಬರುವುದನ್ನು ತಪ್ಪಿಸಬಹುದು ಎಂದು ತಿಳಿಸಿರುತ್ತಾರೆ.

Related posts

ನ್ಯಾಯತರ್ಪು : ರಕ್ತೇಶ್ವರಿ ಪದವು ಬಳಿ ಗುಡ್ಡ ಕುಸಿತ: ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷರು , ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ

Suddi Udaya

2025-26 ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

Suddi Udaya

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಸೌಖ್ಯದಿಂದ ಯುವರಾಜ್ ಪೂಜಾರಿ ನಿಧನ

Suddi Udaya

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

Suddi Udaya
error: Content is protected !!