32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ

ಕಾಯರ್ತಡ್ಕ : ಸರಕಾರಿ ಪ್ರೌಢಶಾಲೆ ಇಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣಾ ಸಮಿತಿ ವತಿಯಿಂದ ಅರಿವು ಕಾರ್ಯಕ್ರಮವನ್ನು ಜು.14 ರಂದು ಆಯೋಜಿಸಲಾಗಿತ್ತು.

ಜಿಲ್ಲಾ ಮಕ್ಕಳ ಹಕ್ಕುಗಳ ಪ್ರಾಧಿಕಾರದ ಸೂಚನೆಯಂತೆ ಈ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರದಲ್ಲಿ ‘ಸುರಕ್ಷಿತ ಸ್ಪರ್ಶ ಮತ್ತು ಅಸುರಕ್ಷಿತ ಸ್ಪರ್ಶ’ ಮತ್ತು ‘ಹದಿ ಹರೆಯದ ಸಮಸ್ಯೆಗಳು’ ಈ ವಿಷಯದ ಬಗ್ಗೆ ಮಾಹಿತಿ ನೀಡಲಾಯಿತು.

ಬೆಳ್ತಂಗಡಿ ತಾಲೂಕು ಅರೋಗ್ಯ ಇಲಾಖೆಯ ಅರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹೆಣ್ಣು ಮಕ್ಕಳಿಗೆ ಸೂಕ್ತ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಇವರು ಮಕ್ಕಳಿಗೆ ಕೆಲವು ಚಟುವಟಿಕೆಗಳನ್ನು ನಡೆಸಿದರು. ಕಾರ್ಯಕ್ರಮದ ಕೊನೆಯಲ್ಲಿ ಹೆಣ್ಣು ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಿರುವುದು ಕಾರ್ಯಕ್ರಮದ ಮುಖ್ಯ ಅಂಗವಾಗಿತ್ತು.

ಕಾರ್ಯಕ್ರಮ ಆರಂಭದಲ್ಲಿ ಮುಖ್ಯ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ಇವರು ಸಂಪನ್ಮೂಲಗಳು ವ್ಯಕ್ತಿಗಳನ್ನು ಪರಿಚಯಿಸಿ ಪ್ರಾಸ್ತವಿಕವಾಗಿ ಮಾತಾಡಿದರು. ಕಾರ್ಯಕ್ರಮದ ನೋಡಲ್ ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ಪೈ ಕಾರ್ಯಕ್ರಮವನ್ನು ಸಂಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಕೊಕ್ಕಡ ವಲಯದ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ರೇಖಾ ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ವತಿಯಿಂದ ವಿದ್ಯಾನಿಧಿ ಯೋಜನೆಗೆ ಕೊಡುಗೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya

ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ: ಬೆಳ್ತಂಗಡಿ ಯುವವಾಹಿನಿ ಘಟಕಕ್ಕೆ ದ್ವಿತೀಯ ಸ್ಥಾನ

Suddi Udaya
error: Content is protected !!