22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ

ಕಾಯರ್ತಡ್ಕ : ಸರಕಾರಿ ಪ್ರೌಢಶಾಲೆ ಇಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣಾ ಸಮಿತಿ ವತಿಯಿಂದ ಅರಿವು ಕಾರ್ಯಕ್ರಮವನ್ನು ಜು.14 ರಂದು ಆಯೋಜಿಸಲಾಗಿತ್ತು.

ಜಿಲ್ಲಾ ಮಕ್ಕಳ ಹಕ್ಕುಗಳ ಪ್ರಾಧಿಕಾರದ ಸೂಚನೆಯಂತೆ ಈ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರದಲ್ಲಿ ‘ಸುರಕ್ಷಿತ ಸ್ಪರ್ಶ ಮತ್ತು ಅಸುರಕ್ಷಿತ ಸ್ಪರ್ಶ’ ಮತ್ತು ‘ಹದಿ ಹರೆಯದ ಸಮಸ್ಯೆಗಳು’ ಈ ವಿಷಯದ ಬಗ್ಗೆ ಮಾಹಿತಿ ನೀಡಲಾಯಿತು.

ಬೆಳ್ತಂಗಡಿ ತಾಲೂಕು ಅರೋಗ್ಯ ಇಲಾಖೆಯ ಅರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹೆಣ್ಣು ಮಕ್ಕಳಿಗೆ ಸೂಕ್ತ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಇವರು ಮಕ್ಕಳಿಗೆ ಕೆಲವು ಚಟುವಟಿಕೆಗಳನ್ನು ನಡೆಸಿದರು. ಕಾರ್ಯಕ್ರಮದ ಕೊನೆಯಲ್ಲಿ ಹೆಣ್ಣು ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಿರುವುದು ಕಾರ್ಯಕ್ರಮದ ಮುಖ್ಯ ಅಂಗವಾಗಿತ್ತು.

ಕಾರ್ಯಕ್ರಮ ಆರಂಭದಲ್ಲಿ ಮುಖ್ಯ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ಇವರು ಸಂಪನ್ಮೂಲಗಳು ವ್ಯಕ್ತಿಗಳನ್ನು ಪರಿಚಯಿಸಿ ಪ್ರಾಸ್ತವಿಕವಾಗಿ ಮಾತಾಡಿದರು. ಕಾರ್ಯಕ್ರಮದ ನೋಡಲ್ ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ಪೈ ಕಾರ್ಯಕ್ರಮವನ್ನು ಸಂಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಕೊಕ್ಕಡ ವಲಯದ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ರೇಖಾ ಭಾಗವಹಿಸಿದ್ದರು.

Related posts

ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ನಡ ಗ್ರಾಮದ ರಂಜಿತ್ ಆಯ್ಕೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

Suddi Udaya

ಬೆಳ್ತಂಗಡಿ ಪತ್ರಕರ್ತರ ಸಂಘಕ್ಕೆ ವಾರ್ತಾಧಿಕಾರಿ ಖಾದರ್‌ಷಾ ಭೇಟಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

Suddi Udaya

ಬೆಳ್ತಂಗಡಿ ಸುಳ್ಳಿನ ಸರದಾರ, ಆಮದು ನಾಯಕ ರಕ್ಷಿತ್ ಶಿವರಾಮ್‌ಗೆ ರಾಜಕೀಯ ಪ್ರಬುದ್ಧತೆ ಇಲ್ಲ. ನಿಮ್ಮ ಸುಳ್ಳನ್ನು ಬೆಳ್ತಂಗಡಿಯ ಪ್ರಬುದ್ದ ಜನರು ಒಪ್ಪಿಕೊಳ್ಳುವುದಿಲ್ಲ, ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ತಿರುಗೇಟು

Suddi Udaya

 ಕಳಿಯ: ಅಕ್ರಮ ಮರಳು ಸಾಗಾಟ: ಎರಡು ಪಿಕಪ್ ವಾಹನ ಸಹಿತ ಮರಳು ವಶ

Suddi Udaya
error: Content is protected !!