September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ

ಕಾಯರ್ತಡ್ಕ : ಸರಕಾರಿ ಪ್ರೌಢಶಾಲೆ ಇಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣಾ ಸಮಿತಿ ವತಿಯಿಂದ ಅರಿವು ಕಾರ್ಯಕ್ರಮವನ್ನು ಜು.14 ರಂದು ಆಯೋಜಿಸಲಾಗಿತ್ತು.

ಜಿಲ್ಲಾ ಮಕ್ಕಳ ಹಕ್ಕುಗಳ ಪ್ರಾಧಿಕಾರದ ಸೂಚನೆಯಂತೆ ಈ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರದಲ್ಲಿ ‘ಸುರಕ್ಷಿತ ಸ್ಪರ್ಶ ಮತ್ತು ಅಸುರಕ್ಷಿತ ಸ್ಪರ್ಶ’ ಮತ್ತು ‘ಹದಿ ಹರೆಯದ ಸಮಸ್ಯೆಗಳು’ ಈ ವಿಷಯದ ಬಗ್ಗೆ ಮಾಹಿತಿ ನೀಡಲಾಯಿತು.

ಬೆಳ್ತಂಗಡಿ ತಾಲೂಕು ಅರೋಗ್ಯ ಇಲಾಖೆಯ ಅರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹೆಣ್ಣು ಮಕ್ಕಳಿಗೆ ಸೂಕ್ತ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಇವರು ಮಕ್ಕಳಿಗೆ ಕೆಲವು ಚಟುವಟಿಕೆಗಳನ್ನು ನಡೆಸಿದರು. ಕಾರ್ಯಕ್ರಮದ ಕೊನೆಯಲ್ಲಿ ಹೆಣ್ಣು ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಿರುವುದು ಕಾರ್ಯಕ್ರಮದ ಮುಖ್ಯ ಅಂಗವಾಗಿತ್ತು.

ಕಾರ್ಯಕ್ರಮ ಆರಂಭದಲ್ಲಿ ಮುಖ್ಯ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ಇವರು ಸಂಪನ್ಮೂಲಗಳು ವ್ಯಕ್ತಿಗಳನ್ನು ಪರಿಚಯಿಸಿ ಪ್ರಾಸ್ತವಿಕವಾಗಿ ಮಾತಾಡಿದರು. ಕಾರ್ಯಕ್ರಮದ ನೋಡಲ್ ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ಪೈ ಕಾರ್ಯಕ್ರಮವನ್ನು ಸಂಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಕೊಕ್ಕಡ ವಲಯದ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ರೇಖಾ ಭಾಗವಹಿಸಿದ್ದರು.

Related posts

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶು ಮಂದಿರದಲ್ಲಿ ಶಾರದಾ ಪೂಜೆ, ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ

Suddi Udaya

ಬಾರ್ಯ : ಪೆರಿಯಟ್ಟು ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!