September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

ಕಾಯರ್ತಡ್ಕ: ಇಲ್ಲಿಯ ಸರಕಾರಿ ಪ್ರೌಢ ಶಾಲೆ ಇದರ 2025-26ನೇ ಸಾಲಿನ ಪ್ರಥಮ ಪೋಷಕರ ಸಭೆ ಜು.15ರಂದು ನಡೆಯಿತು. ಸಭೆಯಲ್ಲಿ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ಕಲಿಕಾ ಚಟುವಟಿಕೆಗಳ ಬಗ್ಗೆ ವಿವರವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಭಾಗವಹಿಸಿದ್ದ ಪೋಷಕರು ಸೂಕ್ತವಾದ ಸಲಹೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಪಾಠ ಆಧಾರಿತ ಪರೀಕ್ಷಾ ಪದ್ಧತಿಯ ಬಗ್ಗೆ ಪೋಷಕರಿಗೆ ಮಾಹಿತಿ ನೀಡಲಾಯಿತು. ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸಿಗುವ ಸವಲತ್ತುಗಳ ಬಗ್ಗೆ ಮುಖ್ಯ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ಮಾಹಿತಿ ನೀಡಿದರು.
ಸಭೆಯಲ್ಲಿ ಮಾತನಾಡಿದ ಶಿಕ್ಷಕ ಆನಂದ ಆಪ್ಟೆ ಇವರು ಮಕ್ಕಳ ಕಲಿಕೆಯಲ್ಲಿ ಪೋಷಕರ ಪಾತ್ರದ ಬಗ್ಗೆ ಅರಿವು ಮೂಡಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಪದ್ಮನಾಭ ಗೌಡ ಇವರು ಶಾಲೆಯ ತುರ್ತು ಅಗತ್ಯಗಳ ಬಗ್ಗೆ ಪೋಷಕರು ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಾಯ ಪಡೆದು ಶಾಲೆಯ ಅಭಿವೃದ್ಧಿಗೆ ಶ್ರಮ ವಹಿಸುವುದಾಗಿ ತಿಳಿಸಿದರು. ಎಸ್.ಡಿ.ಎಂ.ಸಿ. ಸದಸ್ಯ ವಿನಯ ಎಂ ಜಾರ್ಜ್ ಇವರು ಪೋಷಕರಿಗೆ ತಮ್ಮ ಕರ್ತವ್ಯಗಳ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಪ್ರೌಢಶಾಲೆಗೆ 50 ಕುರ್ಚಿಗಳನ್ನು ಕೊಡುಗೆ ನೀಡಿದ್ದ ಪುರಂದರ ಗೌಡ ಇವರ ಪರವಾಗಿ ಎಸ್.ಡಿ.ಎಂ.ಸಿ. ಸದಸ್ಯ ಅವರ ಪತ್ನಿ ಶ್ರೀಮತಿ ಶೋಭಾ ಇವರನ್ನು ಸಮಿತಿ ವತಿಯಿಂದ ಸನ್ಮಾನಿಸಲಾಯಿತು.


ವೇದಿಕೆಯಲ್ಲಿ ಎಸ್.ಡಿ.ಎಂ.ಸಿ. ಸದಸ್ಯರುಗಳಾದ ಗಣೇಶ್, ಶ್ರೀಮತಿ ರಜನಿ, ಶ್ರೀಮತಿ ಹರಿಣಾಕ್ಷಿ, ಜನಾರ್ಧನ ಎಂ ಕೆ, ಜನಾರ್ಧನ ಗೌಡ ಹಾಗೂ ಹಿರಿಯ ಶಿಕ್ಷಕ ವಿನಾಯಕ ಜೋಶಿ ಇವರುಗಳು ಉಪಸ್ಥಿತರಿದ್ದರು.

ಶಿಕ್ಷಕ ಪ್ರಕಾಶ್ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ವಾಣಿ ಧನ್ಯವಾದಗೈದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ಪೈ ನೆರವೇರಿಸಿದರು.

Related posts

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya

ಬೆಳ್ತಂಗಡಿಯಲ್ಲಿ ಸಮಾನ ಮನಸ್ಕರೊಂದಿಗೆ ಸಂವಾದ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಉಜಿರೆ: ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಯುವ ದಿನಾಚರಣೆ

Suddi Udaya
error: Content is protected !!