23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ : ಹರೀಶ್ ಪೂಂಜ ಆಕ್ರೋಶ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕೊಕ್ಕಡ ಬಳಿಯ ಸೌತಡ್ಕದಲ್ಲಿ ಇಂದು ಬೆಳಿಗ್ಗೆ 2 ಕಾಡಾನೆಗಳು ದಿಢೀರ್ ಪ್ರತ್ಯಕ್ಷವಾಗಿ ಸ್ಥಳೀಯ ನಿವಾಸಿ ಬಾಲಕೃಷ್ಣ ಶೆಟ್ಟಿಯವರನ್ನು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಅವರು ಮೃತಪಟ್ಟ ಘಟನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀವ್ರ ದುಃಖ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕೃಷಿ ಚಟುವಟಿಕೆಗಳಿಗೆ ಕಾಡಾನೆಗಳು ದಾಳಿ ನಡೆಸಿ ಹಾನಿ ಮಾಡುತ್ತಿರುವ ಬಗ್ಗೆ ತಾನು ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದಿದ್ದರೂ ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಶಾಸಕರು ಸಂತ್ರಸ್ತ ಕೃಷಿಕರ ನೋವನ್ನು ಅಂದು ಸದನದಲ್ಲಿ ತಾನು ವ್ಯಕ್ತಪಡಿಸಿರುವುದನ್ನು ಬೆಳ್ತಂಗಡಿ ಕಾಂಗ್ರೆಸ್ ಗರು ಅಪಹಾಸ್ಯ ಮಾಡಿದ್ದರು. ಆದರೆ ಇದರ ಗಂಭೀರತೆಗೆ ಓರ್ವ ನಾಗರೀಕನನ್ನು ಕಳೆದುಕೊಂಡದ್ದು ತನಗೆ ಅತೀವ ನೋವನ್ನುಂಟು ಮಾಡಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತು ಆನೆ ದಾಳಿ ಮಾಡುವ ಕೃಷಿ ಪ್ರದೇಶ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಸೂಕ್ತ ತಡೆಬೇಲಿ ನಿರ್ಮಾಣ ಮಾಡಲು ಕ್ರಮ ಕೈಗೊಂಡು ಮೃತ ಬಾಲಕೃಷ್ಣ ಶೆಟ್ಟಿಯವರ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರ ಬಿಡುಗಡೆ ಮಾಡುವಂತೆ ಪತ್ರಿಕಾ ಪ್ರಕಟಣೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

Related posts

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

Suddi Udaya

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya
error: Content is protected !!