September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ : ಹರೀಶ್ ಪೂಂಜ ಆಕ್ರೋಶ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕೊಕ್ಕಡ ಬಳಿಯ ಸೌತಡ್ಕದಲ್ಲಿ ಇಂದು ಬೆಳಿಗ್ಗೆ 2 ಕಾಡಾನೆಗಳು ದಿಢೀರ್ ಪ್ರತ್ಯಕ್ಷವಾಗಿ ಸ್ಥಳೀಯ ನಿವಾಸಿ ಬಾಲಕೃಷ್ಣ ಶೆಟ್ಟಿಯವರನ್ನು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಅವರು ಮೃತಪಟ್ಟ ಘಟನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀವ್ರ ದುಃಖ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕೃಷಿ ಚಟುವಟಿಕೆಗಳಿಗೆ ಕಾಡಾನೆಗಳು ದಾಳಿ ನಡೆಸಿ ಹಾನಿ ಮಾಡುತ್ತಿರುವ ಬಗ್ಗೆ ತಾನು ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದಿದ್ದರೂ ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಶಾಸಕರು ಸಂತ್ರಸ್ತ ಕೃಷಿಕರ ನೋವನ್ನು ಅಂದು ಸದನದಲ್ಲಿ ತಾನು ವ್ಯಕ್ತಪಡಿಸಿರುವುದನ್ನು ಬೆಳ್ತಂಗಡಿ ಕಾಂಗ್ರೆಸ್ ಗರು ಅಪಹಾಸ್ಯ ಮಾಡಿದ್ದರು. ಆದರೆ ಇದರ ಗಂಭೀರತೆಗೆ ಓರ್ವ ನಾಗರೀಕನನ್ನು ಕಳೆದುಕೊಂಡದ್ದು ತನಗೆ ಅತೀವ ನೋವನ್ನುಂಟು ಮಾಡಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತು ಆನೆ ದಾಳಿ ಮಾಡುವ ಕೃಷಿ ಪ್ರದೇಶ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಸೂಕ್ತ ತಡೆಬೇಲಿ ನಿರ್ಮಾಣ ಮಾಡಲು ಕ್ರಮ ಕೈಗೊಂಡು ಮೃತ ಬಾಲಕೃಷ್ಣ ಶೆಟ್ಟಿಯವರ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರ ಬಿಡುಗಡೆ ಮಾಡುವಂತೆ ಪತ್ರಿಕಾ ಪ್ರಕಟಣೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ LAV(Lo Assistance Visit) ಕಾರ್ಯಕ್ರಮ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ಪಿಲಿಚಾಮುಂಡಿಕಲ್ಲಿನಲ್ಲಿ ಭಕ್ತಿ -ಭಾವ ಸಂಭ್ರಮದಿಂದ ಆದ್ದೂರಿಯಾಗಿ ನಡೆದ ದೊಂಪದಬಲಿ ಉತ್ಸವ

Suddi Udaya

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

Suddi Udaya

ಬಾವಂತಬೆಟ್ಟು ಬಾಬು ಶೆಟ್ಟಿ ನಿಧನ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya
error: Content is protected !!