23.5 C
ಪುತ್ತೂರು, ಬೆಳ್ತಂಗಡಿ
June 8, 2026
ರಾಜ್ಯ ಸುದ್ದಿವರದಿಸಮಸ್ಯೆಸರ್ಕಾರಿ ಇಲಾಖಾ ಸುದ್ದಿ

ಕಾಡಾನೆ ದಾಳಿ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಮೊತ್ತ ಪರಿಹಾರ ನೀಡಲು ಉದ್ಯಮಿ ಗಣೇಶ್ ಕಲಾಯಿ ಒತ್ತಾಯ

ಕೊಕ್ಕಡ: ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆ ತಿವಿದು ಬಾಲಕೃಷ್ಣ ಶೆಟ್ಟಿ ಎಂಬವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಕುಟುಂಬಕ್ಕೆ ಸರಕಾರ ಹಾಗೂ ಇಲಾಖೆ ಗರಿಷ್ಠ ಮೊತ್ತ ಪರಿಹಾರ ನೀಡಬೇಕು ಎಂದು ಉದ್ಯಮಿ ಹಾಗೂ ಕೃಷಿಕ ಗಣೇಶ್ ಕಲಾಯಿ ರವರು ಸರಕಾರ ಹಾಗೂ ಇಲಾಖೆಗೆ ಒತ್ತಾಯಿಸಿದ್ದಾರೆ.

ಕಳೆದ 5/6 ವರ್ಷಗಳಿಂದ ಕೊಕ್ಕಡ ಹಾಗೂ ಸುತ್ತ ಮುತ್ತ ಪರಿಸರದಲ್ಲಿ ಕಾಡಾನೆಗಳ ಸಂಚಾರ ಅತಿಯಾಗಿದ್ದು, ಕಳೆದ ವರ್ಷ ರಾಜ್ಯ ಅರಣ್ಯ ಇಲಾಖೆಗೂ ಪತ್ರದ ಮುಖಾಂತರ ತಿಳಿಸಲಾಗಿದೆ, ಆದರೆ ಇಲ್ಲಿಯವರೆಗೆ ಸಂಬಂಧಪಟ್ಟ ಇಲಾಖೆ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿಲ್ಲ. ಇವತ್ತು ಒಂದು ಪ್ರಾಣ ಹಾನಿ ಆಗಿದೆ. ಇದಕ್ಕೆ ಇಲಾಖೆ ನೇರ ಕಾರಣ, ಇಲ್ಲಿನ ಪರಿಸರದ ಕೃಷಿಗಳಿಗೆ ಅದೆಷ್ಟೋ ಹಾನಿ ಆಗಿದೆ, ಮುಂದೆ ಇಂತಹ ಘಟನೆಗಳು ಸಂಭವಿಸದಂತೆ ಆಗಬೇಕಾದರೆ ರಿಸರ್ವ್ ಫಾರೆಸ್ಟ್ ಗಳ ಸುತ್ತ ಆನೆ ಕಂದಕ (EPT) ರಚನೆ ಮಾಡಬೇಕಾಗುತ್ತದೆ. ಇದರ ಬಗ್ಗೆ ಇಲಾಖೆ ಬೇಗನೆ ಕ್ರಮ ಕೈಗೊಳ್ಳಬೇಕು. ಇದರಿಂದ ಆನೆ ಗಳು ನಾಡಿಗೆ ಬರುವುದನ್ನು ತಪ್ಪಿಸಬಹುದು ಎಂದು ತಿಳಿಸಿರುತ್ತಾರೆ.

Related posts

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya

ಸುದ್ದಿ ಉದಯ ಮಾಹಿತಿ ಪೋಸ್ಟರ್ ಅನಾವರಣ: ಸುದ್ದಿ ಉದಯ ಪತ್ರಿಕೆ ಅತ್ಯುತ್ತಮ ಗುಣಮಟ್ಟದೊಂದಿಗೆ ತಾಲೂಕಿನ ನಂಬರ್-1 ಪತ್ರಿಕೆಯಾಗಿ ಬೆಳೆಯುತ್ತಿದೆ: ಸಂಪತ್ ಬಿ. ಸುವರ್ಣ

Suddi Udaya

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

Suddi Udaya
error: Content is protected !!