22.6 C
ಪುತ್ತೂರು, ಬೆಳ್ತಂಗಡಿ
July 23, 2026
ರಾಜ್ಯ ಸುದ್ದಿವರದಿಸಮಸ್ಯೆಸರ್ಕಾರಿ ಇಲಾಖಾ ಸುದ್ದಿ

ಕಾಡಾನೆ ದಾಳಿ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಮೊತ್ತ ಪರಿಹಾರ ನೀಡಲು ಉದ್ಯಮಿ ಗಣೇಶ್ ಕಲಾಯಿ ಒತ್ತಾಯ

ಕೊಕ್ಕಡ: ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆ ತಿವಿದು ಬಾಲಕೃಷ್ಣ ಶೆಟ್ಟಿ ಎಂಬವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಕುಟುಂಬಕ್ಕೆ ಸರಕಾರ ಹಾಗೂ ಇಲಾಖೆ ಗರಿಷ್ಠ ಮೊತ್ತ ಪರಿಹಾರ ನೀಡಬೇಕು ಎಂದು ಉದ್ಯಮಿ ಹಾಗೂ ಕೃಷಿಕ ಗಣೇಶ್ ಕಲಾಯಿ ರವರು ಸರಕಾರ ಹಾಗೂ ಇಲಾಖೆಗೆ ಒತ್ತಾಯಿಸಿದ್ದಾರೆ.

ಕಳೆದ 5/6 ವರ್ಷಗಳಿಂದ ಕೊಕ್ಕಡ ಹಾಗೂ ಸುತ್ತ ಮುತ್ತ ಪರಿಸರದಲ್ಲಿ ಕಾಡಾನೆಗಳ ಸಂಚಾರ ಅತಿಯಾಗಿದ್ದು, ಕಳೆದ ವರ್ಷ ರಾಜ್ಯ ಅರಣ್ಯ ಇಲಾಖೆಗೂ ಪತ್ರದ ಮುಖಾಂತರ ತಿಳಿಸಲಾಗಿದೆ, ಆದರೆ ಇಲ್ಲಿಯವರೆಗೆ ಸಂಬಂಧಪಟ್ಟ ಇಲಾಖೆ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿಲ್ಲ. ಇವತ್ತು ಒಂದು ಪ್ರಾಣ ಹಾನಿ ಆಗಿದೆ. ಇದಕ್ಕೆ ಇಲಾಖೆ ನೇರ ಕಾರಣ, ಇಲ್ಲಿನ ಪರಿಸರದ ಕೃಷಿಗಳಿಗೆ ಅದೆಷ್ಟೋ ಹಾನಿ ಆಗಿದೆ, ಮುಂದೆ ಇಂತಹ ಘಟನೆಗಳು ಸಂಭವಿಸದಂತೆ ಆಗಬೇಕಾದರೆ ರಿಸರ್ವ್ ಫಾರೆಸ್ಟ್ ಗಳ ಸುತ್ತ ಆನೆ ಕಂದಕ (EPT) ರಚನೆ ಮಾಡಬೇಕಾಗುತ್ತದೆ. ಇದರ ಬಗ್ಗೆ ಇಲಾಖೆ ಬೇಗನೆ ಕ್ರಮ ಕೈಗೊಳ್ಳಬೇಕು. ಇದರಿಂದ ಆನೆ ಗಳು ನಾಡಿಗೆ ಬರುವುದನ್ನು ತಪ್ಪಿಸಬಹುದು ಎಂದು ತಿಳಿಸಿರುತ್ತಾರೆ.

Related posts

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟುಓಡಿಲ್ನಾಳ ಗ್ರಾಮ ಸಮಿತಿಯಿಂದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya

ಬೆಳಾಲು : ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ದ್ವಿತೀಯ ಪಿಯುಸಿ ಸಾಧಕ ರಾಮಕೃಷ್ಣ ಶರ್ಮಾರಿಗೆ ಗೌರವ

Suddi Udaya

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ

Suddi Udaya
error: Content is protected !!