25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

ಕಾಯರ್ತಡ್ಕ: ಇಲ್ಲಿಯ ಸರಕಾರಿ ಪ್ರೌಢ ಶಾಲೆ ಇದರ 2025-26ನೇ ಸಾಲಿನ ಪ್ರಥಮ ಪೋಷಕರ ಸಭೆ ಜು.15ರಂದು ನಡೆಯಿತು. ಸಭೆಯಲ್ಲಿ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ಕಲಿಕಾ ಚಟುವಟಿಕೆಗಳ ಬಗ್ಗೆ ವಿವರವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಭಾಗವಹಿಸಿದ್ದ ಪೋಷಕರು ಸೂಕ್ತವಾದ ಸಲಹೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಪಾಠ ಆಧಾರಿತ ಪರೀಕ್ಷಾ ಪದ್ಧತಿಯ ಬಗ್ಗೆ ಪೋಷಕರಿಗೆ ಮಾಹಿತಿ ನೀಡಲಾಯಿತು. ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸಿಗುವ ಸವಲತ್ತುಗಳ ಬಗ್ಗೆ ಮುಖ್ಯ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ಮಾಹಿತಿ ನೀಡಿದರು.
ಸಭೆಯಲ್ಲಿ ಮಾತನಾಡಿದ ಶಿಕ್ಷಕ ಆನಂದ ಆಪ್ಟೆ ಇವರು ಮಕ್ಕಳ ಕಲಿಕೆಯಲ್ಲಿ ಪೋಷಕರ ಪಾತ್ರದ ಬಗ್ಗೆ ಅರಿವು ಮೂಡಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಪದ್ಮನಾಭ ಗೌಡ ಇವರು ಶಾಲೆಯ ತುರ್ತು ಅಗತ್ಯಗಳ ಬಗ್ಗೆ ಪೋಷಕರು ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಾಯ ಪಡೆದು ಶಾಲೆಯ ಅಭಿವೃದ್ಧಿಗೆ ಶ್ರಮ ವಹಿಸುವುದಾಗಿ ತಿಳಿಸಿದರು. ಎಸ್.ಡಿ.ಎಂ.ಸಿ. ಸದಸ್ಯ ವಿನಯ ಎಂ ಜಾರ್ಜ್ ಇವರು ಪೋಷಕರಿಗೆ ತಮ್ಮ ಕರ್ತವ್ಯಗಳ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಪ್ರೌಢಶಾಲೆಗೆ 50 ಕುರ್ಚಿಗಳನ್ನು ಕೊಡುಗೆ ನೀಡಿದ್ದ ಪುರಂದರ ಗೌಡ ಇವರ ಪರವಾಗಿ ಎಸ್.ಡಿ.ಎಂ.ಸಿ. ಸದಸ್ಯ ಅವರ ಪತ್ನಿ ಶ್ರೀಮತಿ ಶೋಭಾ ಇವರನ್ನು ಸಮಿತಿ ವತಿಯಿಂದ ಸನ್ಮಾನಿಸಲಾಯಿತು.


ವೇದಿಕೆಯಲ್ಲಿ ಎಸ್.ಡಿ.ಎಂ.ಸಿ. ಸದಸ್ಯರುಗಳಾದ ಗಣೇಶ್, ಶ್ರೀಮತಿ ರಜನಿ, ಶ್ರೀಮತಿ ಹರಿಣಾಕ್ಷಿ, ಜನಾರ್ಧನ ಎಂ ಕೆ, ಜನಾರ್ಧನ ಗೌಡ ಹಾಗೂ ಹಿರಿಯ ಶಿಕ್ಷಕ ವಿನಾಯಕ ಜೋಶಿ ಇವರುಗಳು ಉಪಸ್ಥಿತರಿದ್ದರು.

ಶಿಕ್ಷಕ ಪ್ರಕಾಶ್ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ವಾಣಿ ಧನ್ಯವಾದಗೈದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ಪೈ ನೆರವೇರಿಸಿದರು.

Related posts

ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪುರಿಗೆ ಗೌರವಾರ್ಪಣೆ

Suddi Udaya

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟುಓಡಿಲ್ನಾಳ ಗ್ರಾಮ ಸಮಿತಿಯಿಂದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya
error: Content is protected !!