23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

ಕಾಯರ್ತಡ್ಕ: ಇಲ್ಲಿಯ ಸರಕಾರಿ ಪ್ರೌಢ ಶಾಲೆ ಇದರ 2025-26ನೇ ಸಾಲಿನ ಪ್ರಥಮ ಪೋಷಕರ ಸಭೆ ಜು.15ರಂದು ನಡೆಯಿತು. ಸಭೆಯಲ್ಲಿ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ಕಲಿಕಾ ಚಟುವಟಿಕೆಗಳ ಬಗ್ಗೆ ವಿವರವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಭಾಗವಹಿಸಿದ್ದ ಪೋಷಕರು ಸೂಕ್ತವಾದ ಸಲಹೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಪಾಠ ಆಧಾರಿತ ಪರೀಕ್ಷಾ ಪದ್ಧತಿಯ ಬಗ್ಗೆ ಪೋಷಕರಿಗೆ ಮಾಹಿತಿ ನೀಡಲಾಯಿತು. ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸಿಗುವ ಸವಲತ್ತುಗಳ ಬಗ್ಗೆ ಮುಖ್ಯ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ಮಾಹಿತಿ ನೀಡಿದರು.
ಸಭೆಯಲ್ಲಿ ಮಾತನಾಡಿದ ಶಿಕ್ಷಕ ಆನಂದ ಆಪ್ಟೆ ಇವರು ಮಕ್ಕಳ ಕಲಿಕೆಯಲ್ಲಿ ಪೋಷಕರ ಪಾತ್ರದ ಬಗ್ಗೆ ಅರಿವು ಮೂಡಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಪದ್ಮನಾಭ ಗೌಡ ಇವರು ಶಾಲೆಯ ತುರ್ತು ಅಗತ್ಯಗಳ ಬಗ್ಗೆ ಪೋಷಕರು ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಾಯ ಪಡೆದು ಶಾಲೆಯ ಅಭಿವೃದ್ಧಿಗೆ ಶ್ರಮ ವಹಿಸುವುದಾಗಿ ತಿಳಿಸಿದರು. ಎಸ್.ಡಿ.ಎಂ.ಸಿ. ಸದಸ್ಯ ವಿನಯ ಎಂ ಜಾರ್ಜ್ ಇವರು ಪೋಷಕರಿಗೆ ತಮ್ಮ ಕರ್ತವ್ಯಗಳ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಪ್ರೌಢಶಾಲೆಗೆ 50 ಕುರ್ಚಿಗಳನ್ನು ಕೊಡುಗೆ ನೀಡಿದ್ದ ಪುರಂದರ ಗೌಡ ಇವರ ಪರವಾಗಿ ಎಸ್.ಡಿ.ಎಂ.ಸಿ. ಸದಸ್ಯ ಅವರ ಪತ್ನಿ ಶ್ರೀಮತಿ ಶೋಭಾ ಇವರನ್ನು ಸಮಿತಿ ವತಿಯಿಂದ ಸನ್ಮಾನಿಸಲಾಯಿತು.


ವೇದಿಕೆಯಲ್ಲಿ ಎಸ್.ಡಿ.ಎಂ.ಸಿ. ಸದಸ್ಯರುಗಳಾದ ಗಣೇಶ್, ಶ್ರೀಮತಿ ರಜನಿ, ಶ್ರೀಮತಿ ಹರಿಣಾಕ್ಷಿ, ಜನಾರ್ಧನ ಎಂ ಕೆ, ಜನಾರ್ಧನ ಗೌಡ ಹಾಗೂ ಹಿರಿಯ ಶಿಕ್ಷಕ ವಿನಾಯಕ ಜೋಶಿ ಇವರುಗಳು ಉಪಸ್ಥಿತರಿದ್ದರು.

ಶಿಕ್ಷಕ ಪ್ರಕಾಶ್ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ವಾಣಿ ಧನ್ಯವಾದಗೈದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ಪೈ ನೆರವೇರಿಸಿದರು.

Related posts

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು : 37ನೇ ಶಿಶ್ಯೋಪನಯನ ಕಾರ್ಯಕ್ರಮ: 150 ನೂತನ ವಿದ್ಯಾರ್ಥಿಗಳಿಂದ ದೀಕ್ಷೆ ಸ್ವೀಕಾರ

Suddi Udaya

ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ರಾವ್ ರವರಿಗೆ ಬೀಳ್ಕೂಡುಗೆ ಸಮಾರಂಭ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

Suddi Udaya

ಬಂದಾರು : ಬಂದಾರು ಗ್ರಾ.ಪಂ. ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!