22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ


ಧರ್ಮಸ್ಥಳ: ಪುರಾಣ ಅಂದರೆ ಭಗವಂತನ ಕಥೆ. ಪುರಾಣ ವಾಚನ-ಪ್ರವಚನ ಎಂಬುದು ಜ್ಞಾನ ಯಜ್ಞ ಹಾಗೂ ಜ್ಞಾನ ಸತ್ರವಾಗಿದ್ದು ಆಸಕ್ತಿ ಮತ್ತು ತನ್ಮಯತೆಯೊಂದಿಗೆ ಶ್ರದ್ಧಾ-ಭಕ್ತಿಯಿಂದ ಪುರಾಣ ವಾಚನ-ಪ್ರವಚನ ಶ್ರವಣದಿಂದ ಪ್ರತಿಯೊಬ್ಬರ ಮನದಲ್ಲೂ, ಮನೆಯಲ್ಲೂ ಸುಖ, ಶಾಂತಿ-ನೆಮ್ಮದಿ ನೆಲೆಸಿ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ನಿವೃತ್ತ ಉಪನ್ಯಾಸಕ ಡಾ. ಶಾಂತರಾಮ ಪ್ರಭು, ನಿಟ್ಟೂರು ಹೇಳಿದರು.


 ಅವರು ಜು. 16 ರಂದು ಧರ್ಮಸ್ಥಳದಲ್ಲಿ ಪ್ರವಚನಮಂಟಪದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಾಭಾರತ ಕಥೆ ಕೇಳಿ ಕುಷ್ಠ ರೋಗ ನಿವಾರಣೆಯಾಗಿದೆ ಎಂದು ಪುರಾಣದಿಂದ ತಿಳಿದು ಬಂದಿದೆ. ಪುರಾಣ ವಾಚನ-ಪ್ರವಚನವನ್ನು ಶ್ರದ್ಧಾ-ಭಕ್ತಿಯಿಂದ ಆಲಿಸುವ ಸತ್ಸಂಗದಿಂದ ಪರಸ್ಪರ ಪ್ರೀತಿ-ವಿಶ್ವಾಸ, ಭ್ರಾತೃತ್ವ, ದಯೆ, ಅನುಕಂಪ ಮೊದಲಾದ ಮಾನವೀಯಮೌಲ್ಯಗಳು ಉದ್ದೀಪನಗೊಂಡು ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.


ಅಧ್ಯಕ್ಷತೆ ವಹಿಸಿದ ಡಿ. ಹರ್ಷೇಂದ್ರ ಕುಮಾರ್ ಮಾತನಾಡಿ, ಓದುವ ಹವ್ಯಾಸದಿಂದ ನಮ್ಮ ಜ್ಞಾನಕ್ಷಿತಿಜ ವಿಸ್ತಾರವಾಗುತ್ತದೆ. ಊರಿನವರು ಹಾಗೂ ಧರ್ಮಸ್ಥಳಕ್ಕೆ ಬರುವ ಭಕ್ತರು ಕೂಡಾ ಪುರಾಣ ವಾಚನ-ಪ್ರವಚನದ ಸದುಪಯೋಗ ಪಡೆದು ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.
ದೇವಳದ ಪಾರುಪತ್ಯಹಾರರಾದ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಲೆಕ್ಕಪತ್ರ ವಿಭಾಗದ ಮುಖ್ಯಸ್ಥರಾದ ಪುರಂದರ ಭಟ್, ಉದಯಕುಮಾರ್ ಜೈನ್, ಚಂದ್ರಕಾಂತ್, ಮಹಾವೀರ ಅಜ್ರಿ, ಸಂತೋಷ್, ಭುಜಬಲಿ ಧರ್ಮಸ್ಥಳ ಮೊದÀಲಾದವರು ಉಪಸ್ಥಿತರಿದ್ದರು.


ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶಿಕ್ಷಕ ನಿಶಾಂತ್ ಧನ್ಯವಾದವಿತ್ತರು.
ಕುಮಾರವ್ಯಾಸ ವಿರಚಿತ “ಕರ್ಣಾಟ ಭಾರತ ಕಥಾಮಂಜರಿ” ಬಗ್ಗೆ ಗಣಪತಿ ಪದ್ಯಾಣ ವಾಚನಕಾರರಾಗಿ ಹಾಗೂ ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿ ಸಹಕರಿಸಿದರು.
ಸೆಪ್ಟೆಂಬರ್ 16 ರ ವರೆಗೆ ಎರಡು ತಿಂಗಳು ಪ್ರತಿದಿನ ಸಂಜೆ ಗಂಟೆ 6.30 ರಿಂದ ರಾತ್ರಿ 8.00 ರ ವರೆಗೆ ಪುರಾಣ ವಾಚನ-ಪ್ರವಚನ ನಡೆಯಲಿದೆ.

Related posts

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

Suddi Udaya

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!