25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ


ಧರ್ಮಸ್ಥಳ: ಪುರಾಣ ಅಂದರೆ ಭಗವಂತನ ಕಥೆ. ಪುರಾಣ ವಾಚನ-ಪ್ರವಚನ ಎಂಬುದು ಜ್ಞಾನ ಯಜ್ಞ ಹಾಗೂ ಜ್ಞಾನ ಸತ್ರವಾಗಿದ್ದು ಆಸಕ್ತಿ ಮತ್ತು ತನ್ಮಯತೆಯೊಂದಿಗೆ ಶ್ರದ್ಧಾ-ಭಕ್ತಿಯಿಂದ ಪುರಾಣ ವಾಚನ-ಪ್ರವಚನ ಶ್ರವಣದಿಂದ ಪ್ರತಿಯೊಬ್ಬರ ಮನದಲ್ಲೂ, ಮನೆಯಲ್ಲೂ ಸುಖ, ಶಾಂತಿ-ನೆಮ್ಮದಿ ನೆಲೆಸಿ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ನಿವೃತ್ತ ಉಪನ್ಯಾಸಕ ಡಾ. ಶಾಂತರಾಮ ಪ್ರಭು, ನಿಟ್ಟೂರು ಹೇಳಿದರು.


 ಅವರು ಜು. 16 ರಂದು ಧರ್ಮಸ್ಥಳದಲ್ಲಿ ಪ್ರವಚನಮಂಟಪದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಾಭಾರತ ಕಥೆ ಕೇಳಿ ಕುಷ್ಠ ರೋಗ ನಿವಾರಣೆಯಾಗಿದೆ ಎಂದು ಪುರಾಣದಿಂದ ತಿಳಿದು ಬಂದಿದೆ. ಪುರಾಣ ವಾಚನ-ಪ್ರವಚನವನ್ನು ಶ್ರದ್ಧಾ-ಭಕ್ತಿಯಿಂದ ಆಲಿಸುವ ಸತ್ಸಂಗದಿಂದ ಪರಸ್ಪರ ಪ್ರೀತಿ-ವಿಶ್ವಾಸ, ಭ್ರಾತೃತ್ವ, ದಯೆ, ಅನುಕಂಪ ಮೊದಲಾದ ಮಾನವೀಯಮೌಲ್ಯಗಳು ಉದ್ದೀಪನಗೊಂಡು ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.


ಅಧ್ಯಕ್ಷತೆ ವಹಿಸಿದ ಡಿ. ಹರ್ಷೇಂದ್ರ ಕುಮಾರ್ ಮಾತನಾಡಿ, ಓದುವ ಹವ್ಯಾಸದಿಂದ ನಮ್ಮ ಜ್ಞಾನಕ್ಷಿತಿಜ ವಿಸ್ತಾರವಾಗುತ್ತದೆ. ಊರಿನವರು ಹಾಗೂ ಧರ್ಮಸ್ಥಳಕ್ಕೆ ಬರುವ ಭಕ್ತರು ಕೂಡಾ ಪುರಾಣ ವಾಚನ-ಪ್ರವಚನದ ಸದುಪಯೋಗ ಪಡೆದು ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.
ದೇವಳದ ಪಾರುಪತ್ಯಹಾರರಾದ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಲೆಕ್ಕಪತ್ರ ವಿಭಾಗದ ಮುಖ್ಯಸ್ಥರಾದ ಪುರಂದರ ಭಟ್, ಉದಯಕುಮಾರ್ ಜೈನ್, ಚಂದ್ರಕಾಂತ್, ಮಹಾವೀರ ಅಜ್ರಿ, ಸಂತೋಷ್, ಭುಜಬಲಿ ಧರ್ಮಸ್ಥಳ ಮೊದÀಲಾದವರು ಉಪಸ್ಥಿತರಿದ್ದರು.


ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶಿಕ್ಷಕ ನಿಶಾಂತ್ ಧನ್ಯವಾದವಿತ್ತರು.
ಕುಮಾರವ್ಯಾಸ ವಿರಚಿತ “ಕರ್ಣಾಟ ಭಾರತ ಕಥಾಮಂಜರಿ” ಬಗ್ಗೆ ಗಣಪತಿ ಪದ್ಯಾಣ ವಾಚನಕಾರರಾಗಿ ಹಾಗೂ ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿ ಸಹಕರಿಸಿದರು.
ಸೆಪ್ಟೆಂಬರ್ 16 ರ ವರೆಗೆ ಎರಡು ತಿಂಗಳು ಪ್ರತಿದಿನ ಸಂಜೆ ಗಂಟೆ 6.30 ರಿಂದ ರಾತ್ರಿ 8.00 ರ ವರೆಗೆ ಪುರಾಣ ವಾಚನ-ಪ್ರವಚನ ನಡೆಯಲಿದೆ.

Related posts

ಉಜಿರೆ: ಶ್ರೀ ಧ. ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಜನ್ಮದಿನಾಚರಣೆ

Suddi Udaya

ಬಳಂಜ: ಸುವರ್ಣ ನಿಲಯದ ವೆಂಕಮ್ಮ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಪ್ರಸಿದ್ಧ ಗುಜರಾತ್ ಉದ್ಯಮಿ ಶಶಿಧ‌ರ್ ಶೆಟ್ಟಿ ನವಶಕ್ತಿ ಯವರಿಗೆ ಮಾತೃ ವಿಯೋಗ

Suddi Udaya

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ನಾವೂರಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya
error: Content is protected !!