23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ


ಧರ್ಮಸ್ಥಳ: ಪುರಾಣ ಅಂದರೆ ಭಗವಂತನ ಕಥೆ. ಪುರಾಣ ವಾಚನ-ಪ್ರವಚನ ಎಂಬುದು ಜ್ಞಾನ ಯಜ್ಞ ಹಾಗೂ ಜ್ಞಾನ ಸತ್ರವಾಗಿದ್ದು ಆಸಕ್ತಿ ಮತ್ತು ತನ್ಮಯತೆಯೊಂದಿಗೆ ಶ್ರದ್ಧಾ-ಭಕ್ತಿಯಿಂದ ಪುರಾಣ ವಾಚನ-ಪ್ರವಚನ ಶ್ರವಣದಿಂದ ಪ್ರತಿಯೊಬ್ಬರ ಮನದಲ್ಲೂ, ಮನೆಯಲ್ಲೂ ಸುಖ, ಶಾಂತಿ-ನೆಮ್ಮದಿ ನೆಲೆಸಿ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ನಿವೃತ್ತ ಉಪನ್ಯಾಸಕ ಡಾ. ಶಾಂತರಾಮ ಪ್ರಭು, ನಿಟ್ಟೂರು ಹೇಳಿದರು.


 ಅವರು ಜು. 16 ರಂದು ಧರ್ಮಸ್ಥಳದಲ್ಲಿ ಪ್ರವಚನಮಂಟಪದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಾಭಾರತ ಕಥೆ ಕೇಳಿ ಕುಷ್ಠ ರೋಗ ನಿವಾರಣೆಯಾಗಿದೆ ಎಂದು ಪುರಾಣದಿಂದ ತಿಳಿದು ಬಂದಿದೆ. ಪುರಾಣ ವಾಚನ-ಪ್ರವಚನವನ್ನು ಶ್ರದ್ಧಾ-ಭಕ್ತಿಯಿಂದ ಆಲಿಸುವ ಸತ್ಸಂಗದಿಂದ ಪರಸ್ಪರ ಪ್ರೀತಿ-ವಿಶ್ವಾಸ, ಭ್ರಾತೃತ್ವ, ದಯೆ, ಅನುಕಂಪ ಮೊದಲಾದ ಮಾನವೀಯಮೌಲ್ಯಗಳು ಉದ್ದೀಪನಗೊಂಡು ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.


ಅಧ್ಯಕ್ಷತೆ ವಹಿಸಿದ ಡಿ. ಹರ್ಷೇಂದ್ರ ಕುಮಾರ್ ಮಾತನಾಡಿ, ಓದುವ ಹವ್ಯಾಸದಿಂದ ನಮ್ಮ ಜ್ಞಾನಕ್ಷಿತಿಜ ವಿಸ್ತಾರವಾಗುತ್ತದೆ. ಊರಿನವರು ಹಾಗೂ ಧರ್ಮಸ್ಥಳಕ್ಕೆ ಬರುವ ಭಕ್ತರು ಕೂಡಾ ಪುರಾಣ ವಾಚನ-ಪ್ರವಚನದ ಸದುಪಯೋಗ ಪಡೆದು ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.
ದೇವಳದ ಪಾರುಪತ್ಯಹಾರರಾದ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಲೆಕ್ಕಪತ್ರ ವಿಭಾಗದ ಮುಖ್ಯಸ್ಥರಾದ ಪುರಂದರ ಭಟ್, ಉದಯಕುಮಾರ್ ಜೈನ್, ಚಂದ್ರಕಾಂತ್, ಮಹಾವೀರ ಅಜ್ರಿ, ಸಂತೋಷ್, ಭುಜಬಲಿ ಧರ್ಮಸ್ಥಳ ಮೊದÀಲಾದವರು ಉಪಸ್ಥಿತರಿದ್ದರು.


ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶಿಕ್ಷಕ ನಿಶಾಂತ್ ಧನ್ಯವಾದವಿತ್ತರು.
ಕುಮಾರವ್ಯಾಸ ವಿರಚಿತ “ಕರ್ಣಾಟ ಭಾರತ ಕಥಾಮಂಜರಿ” ಬಗ್ಗೆ ಗಣಪತಿ ಪದ್ಯಾಣ ವಾಚನಕಾರರಾಗಿ ಹಾಗೂ ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿ ಸಹಕರಿಸಿದರು.
ಸೆಪ್ಟೆಂಬರ್ 16 ರ ವರೆಗೆ ಎರಡು ತಿಂಗಳು ಪ್ರತಿದಿನ ಸಂಜೆ ಗಂಟೆ 6.30 ರಿಂದ ರಾತ್ರಿ 8.00 ರ ವರೆಗೆ ಪುರಾಣ ವಾಚನ-ಪ್ರವಚನ ನಡೆಯಲಿದೆ.

Related posts

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya

ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

Suddi Udaya

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

Suddi Udaya

ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆ ಆವರಣದಲ್ಲಿ ವನ ಮಹೋತ್ಸವ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್; ಶೇ 50ರಷ್ಟು ರಿಯಾಯಿತಿ: ಖರೀದಿಗೆ ಮುಗಿಬಿದ್ದ ಜನರು

Suddi Udaya

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!