September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ನಿವೃತ್ತ ಉಪತಹಶೀಲ್ದಾರ್, ಪ್ರಗತಿಪರ ಕೃಷಿಕ, ನಾಳ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಗುಂಡೂರಾವ್ ವಿಧಿವಶ

ಗೇರುಕಟ್ಟೆ : ನ್ಯಾಯತಪು೯ ಗ್ರಾಮದ ಗೇರುಕಟ್ಟೆ ಬಳಿಯ ನಾಳ ಹೊಸಮನೆ ನಿವಾಸಿ, ಪ್ರಗತಿಪರ ಕೃಷಿಕ, ನಿವೃತ್ತ ಉಪತಹಶೀಲ್ದಾರ್, ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರಾಗಿ ಸೇವೆ ಸಲ್ಲಿಸಿದ್ದ ಗುಂಡೂರಾವ್ (72 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜು.16 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು.


ಗುಂಡೂರಾವ್ ಅವರು 2002 ರಿಂದ 2008 ರವರೆಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರಾಗಿ, ಜೀರ್ಣೋದ್ದಾರ ಸಮಿತಿಯ ಮಾಜಿ ಅಧ್ಯಕ್ಷರಾಗಿ, ದೇವಸ್ಥಾನದ ಪ್ರತಿಯೊಂದು ಕಾರ್ಯಕ್ರಮಗಳಲ್ಲೂ ಸಕ್ರೀಯವಾಗಿ ಭಾಗವಹಿಸುತ್ತಿದ್ದರು. ಪ್ರಗತಿಪರ ಕೃಷಿಕರಾಗಿದ್ದ ಇವರು ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ, ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸಿ ಉಪತಹಶೀಲ್ದಾರ್ ಆಗಿ ಭಡ್ತಿಗೊಂಡು ಬಂಟ್ವಾಳ ತಾಲೂಕು ಕಚೇರಿಗೆ ವರ್ಗಾವಣೆಗೊಂಡು ಬಳಿಕ ಅಲ್ಲಿಯೇ ನಿವೃತ್ತಿ ಹೊಂದಿದ್ದರು.


ಮೃತರು ಇಬ್ಬರು ಗಂಡು ಮಕ್ಕಳು, ಓರ್ವ ಹೆಣ್ಣುಮಗಳು, ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ : ಹರೀಶ್ ಪೂಂಜ

Suddi Udaya

ಮೇಲಂತ ಬೆಟ್ಟು ಪಕ್ಕಿದಕಲ ನಿವಾಸಿ ಪದ್ಮಮೂಲ್ಯ ನಿಧನ

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya
error: Content is protected !!