23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ನಿವೃತ್ತ ಉಪತಹಶೀಲ್ದಾರ್, ಪ್ರಗತಿಪರ ಕೃಷಿಕ, ನಾಳ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಗುಂಡೂರಾವ್ ವಿಧಿವಶ

ಗೇರುಕಟ್ಟೆ : ನ್ಯಾಯತಪು೯ ಗ್ರಾಮದ ಗೇರುಕಟ್ಟೆ ಬಳಿಯ ನಾಳ ಹೊಸಮನೆ ನಿವಾಸಿ, ಪ್ರಗತಿಪರ ಕೃಷಿಕ, ನಿವೃತ್ತ ಉಪತಹಶೀಲ್ದಾರ್, ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರಾಗಿ ಸೇವೆ ಸಲ್ಲಿಸಿದ್ದ ಗುಂಡೂರಾವ್ (72 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜು.16 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು.


ಗುಂಡೂರಾವ್ ಅವರು 2002 ರಿಂದ 2008 ರವರೆಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರಾಗಿ, ಜೀರ್ಣೋದ್ದಾರ ಸಮಿತಿಯ ಮಾಜಿ ಅಧ್ಯಕ್ಷರಾಗಿ, ದೇವಸ್ಥಾನದ ಪ್ರತಿಯೊಂದು ಕಾರ್ಯಕ್ರಮಗಳಲ್ಲೂ ಸಕ್ರೀಯವಾಗಿ ಭಾಗವಹಿಸುತ್ತಿದ್ದರು. ಪ್ರಗತಿಪರ ಕೃಷಿಕರಾಗಿದ್ದ ಇವರು ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ, ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸಿ ಉಪತಹಶೀಲ್ದಾರ್ ಆಗಿ ಭಡ್ತಿಗೊಂಡು ಬಂಟ್ವಾಳ ತಾಲೂಕು ಕಚೇರಿಗೆ ವರ್ಗಾವಣೆಗೊಂಡು ಬಳಿಕ ಅಲ್ಲಿಯೇ ನಿವೃತ್ತಿ ಹೊಂದಿದ್ದರು.


ಮೃತರು ಇಬ್ಬರು ಗಂಡು ಮಕ್ಕಳು, ಓರ್ವ ಹೆಣ್ಣುಮಗಳು, ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಶ್ರೀ ಗುರುಪೂಜೆ: ಮಾತೃ ಸಂಘದಿಂದ ಮಂಜೂರಾದ 2 ಅಶಕ್ತ ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಮರುಮೌಲ್ಯಮಾಪನ ಫಲಿತಾಂಶ: ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜು ತಾಲೂಕಿನಲ್ಲಿ ಪ್ರಥಮ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya

ಹೈಕೋರ್ಟ್ ಇ.ಡಿ ಪರ ವಕೀಲರಾಗಿ ಕರುಣಾಕರ ಗೌಡ ಪಿ. ಕೊಯ್ಯೂರು ಆಯ್ಕೆ

Suddi Udaya

ಎ.22: ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಹರಿ ದರ್ಶನ” ಯಕ್ಷಗಾನ ಬಯಲಾಟ

Suddi Udaya
error: Content is protected !!