ಬಂದಾರು: ಬಂದಾರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.17 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಅಧ್ಯಕ್ಷತೆಯಲ್ಲಿ ನಡೆಯಿತು.
ನೋಡೆಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ಸಭೆಯನ್ನು ಮುನ್ನಡೆಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾವಾರು ಮಾಹಿತಿ ನೀಡಿದರು.
ಈ ವೇಳೆ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಗ್ರಾಮಕ್ಕೆ ಹೆಸರು ತಂದು ಕೀರ್ತಿ ಪೆರ್ಲ ಬೈಪಾಡಿ ಹಾಗೂ ಬುಳೇರಿ ಶಾಲೆಯ ಮುಖ್ಯೋಪಾಧ್ಯಾಯರನ್ನು ಗೌರವಿಸಲಾಯಿತು. ನಿವೃತ್ತ ಸರ್ಕಾರಿ ಅಧಿಕಾರಿ ರತ್ನವಾತಿ ಅವರನ್ನು ಸನ್ಮಾನಿಸಲಾಯಿತು
ಉಪಾಧ್ಯಕ್ಷೆ ಪುಷ್ಪಾವತಿ ಸದಸ್ಯರಾದ ಚೇತನ್ ಕುಮಾರ್, ವಿಮಲ, ಭಾರತಿ, ಗಂಗಧಾರ ಪೂಜಾರಿ, ಸುಚಿತ್ರಾ, ಅನಿತಾ, ಶಿವ ಗೌಡ, ಬಾಲಕೃಷ್ಣ ಗೌಡ ಎಂ. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ಜಿ . ಸ್ವಾಗತಿಸಿದರು. ಸಿಬ್ಬಂದಿಗಳಾದ ದಿನಕರ ಜಮಾ ಖುರ್ಚಿನ ವಿವರ ನೀಡಿದರು ಮತ್ತು ಪ್ರವೀಣ್ ವಾರ್ಡ್ ಸಭೆ ಬೇಡಿಕೆ ವಾಚಿಸಿದರು. ಸಿಬ್ಬಂದಿಗಳಾದ ಶಾಂತಿ.ಬಿ, ಉಷಾ, ಪವಿತ್ರ, ಸಹನ, ಸರೋಜಿನಿ, ಕೇಶವ, ರಕ್ಷಿತಾ ಸಹಕರಿಸಿದರು.











