22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

ಬಂದಾರು: ಬಂದಾರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.17 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಅಧ್ಯಕ್ಷತೆಯಲ್ಲಿ ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ಸಭೆಯನ್ನು ಮುನ್ನಡೆಸಿದರು. ‌

ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾವಾರು ಮಾಹಿತಿ ನೀಡಿದರು.

ಈ ವೇಳೆ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಗ್ರಾಮಕ್ಕೆ ಹೆಸರು ತಂದು ಕೀರ್ತಿ ಪೆರ್ಲ ಬೈಪಾಡಿ ಹಾಗೂ ಬುಳೇರಿ ಶಾಲೆಯ ಮುಖ್ಯೋಪಾಧ್ಯಾಯರನ್ನು ಗೌರವಿಸಲಾಯಿತು. ನಿವೃತ್ತ ಸರ್ಕಾರಿ ಅಧಿಕಾರಿ ರತ್ನವಾತಿ ಅವರನ್ನು ಸನ್ಮಾನಿಸಲಾಯಿತು

ಉಪಾಧ್ಯಕ್ಷೆ ಪುಷ್ಪಾವತಿ ಸದಸ್ಯರಾದ ಚೇತನ್ ಕುಮಾರ್, ವಿಮಲ, ಭಾರತಿ, ಗಂಗಧಾರ ಪೂಜಾರಿ, ಸುಚಿತ್ರಾ, ಅನಿತಾ, ಶಿವ ಗೌಡ, ಬಾಲಕೃಷ್ಣ ಗೌಡ ಎಂ. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ಜಿ . ಸ್ವಾಗತಿಸಿದರು. ಸಿಬ್ಬಂದಿಗಳಾದ ದಿನಕರ ಜಮಾ ಖುರ್ಚಿನ ವಿವರ ನೀಡಿದರು ಮತ್ತು ಪ್ರವೀಣ್ ವಾರ್ಡ್ ಸಭೆ ಬೇಡಿಕೆ ವಾಚಿಸಿದರು. ಸಿಬ್ಬಂದಿಗಳಾದ ಶಾಂತಿ.ಬಿ, ಉಷಾ, ಪವಿತ್ರ, ಸಹನ, ಸರೋಜಿನಿ, ಕೇಶವ, ರಕ್ಷಿತಾ ಸಹಕರಿಸಿದರು.

Related posts

ಅ.13: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಕನ್ಯಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ

Suddi Udaya

ಬಂದಾರು: ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

Suddi Udaya

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya

ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ: ಮತ್ತೊಬ್ಬನ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

Suddi Udaya

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಸಭೆ

Suddi Udaya
error: Content is protected !!