September 6, 2026
ರಾಜ್ಯ ಸುದ್ದಿವರದಿಸಮಸ್ಯೆಸರ್ಕಾರಿ ಇಲಾಖಾ ಸುದ್ದಿ

ಕಾಡಾನೆ ದಾಳಿ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಮೊತ್ತ ಪರಿಹಾರ ನೀಡಲು ಉದ್ಯಮಿ ಗಣೇಶ್ ಕಲಾಯಿ ಒತ್ತಾಯ

ಕೊಕ್ಕಡ: ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆ ತಿವಿದು ಬಾಲಕೃಷ್ಣ ಶೆಟ್ಟಿ ಎಂಬವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಕುಟುಂಬಕ್ಕೆ ಸರಕಾರ ಹಾಗೂ ಇಲಾಖೆ ಗರಿಷ್ಠ ಮೊತ್ತ ಪರಿಹಾರ ನೀಡಬೇಕು ಎಂದು ಉದ್ಯಮಿ ಹಾಗೂ ಕೃಷಿಕ ಗಣೇಶ್ ಕಲಾಯಿ ರವರು ಸರಕಾರ ಹಾಗೂ ಇಲಾಖೆಗೆ ಒತ್ತಾಯಿಸಿದ್ದಾರೆ.

ಕಳೆದ 5/6 ವರ್ಷಗಳಿಂದ ಕೊಕ್ಕಡ ಹಾಗೂ ಸುತ್ತ ಮುತ್ತ ಪರಿಸರದಲ್ಲಿ ಕಾಡಾನೆಗಳ ಸಂಚಾರ ಅತಿಯಾಗಿದ್ದು, ಕಳೆದ ವರ್ಷ ರಾಜ್ಯ ಅರಣ್ಯ ಇಲಾಖೆಗೂ ಪತ್ರದ ಮುಖಾಂತರ ತಿಳಿಸಲಾಗಿದೆ, ಆದರೆ ಇಲ್ಲಿಯವರೆಗೆ ಸಂಬಂಧಪಟ್ಟ ಇಲಾಖೆ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿಲ್ಲ. ಇವತ್ತು ಒಂದು ಪ್ರಾಣ ಹಾನಿ ಆಗಿದೆ. ಇದಕ್ಕೆ ಇಲಾಖೆ ನೇರ ಕಾರಣ, ಇಲ್ಲಿನ ಪರಿಸರದ ಕೃಷಿಗಳಿಗೆ ಅದೆಷ್ಟೋ ಹಾನಿ ಆಗಿದೆ, ಮುಂದೆ ಇಂತಹ ಘಟನೆಗಳು ಸಂಭವಿಸದಂತೆ ಆಗಬೇಕಾದರೆ ರಿಸರ್ವ್ ಫಾರೆಸ್ಟ್ ಗಳ ಸುತ್ತ ಆನೆ ಕಂದಕ (EPT) ರಚನೆ ಮಾಡಬೇಕಾಗುತ್ತದೆ. ಇದರ ಬಗ್ಗೆ ಇಲಾಖೆ ಬೇಗನೆ ಕ್ರಮ ಕೈಗೊಳ್ಳಬೇಕು. ಇದರಿಂದ ಆನೆ ಗಳು ನಾಡಿಗೆ ಬರುವುದನ್ನು ತಪ್ಪಿಸಬಹುದು ಎಂದು ತಿಳಿಸಿರುತ್ತಾರೆ.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸುಜಿತಾ ವಿ. ಬಂಗೇರ ಮತ್ತು ಬಿನುತಾ ಬಂಗೇರ ಭೇಟಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

Suddi Udaya

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya
error: Content is protected !!