ಕಾಯರ್ತಡ್ಕ : ಸರಕಾರಿ ಪ್ರೌಢಶಾಲೆ ಇಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣಾ ಸಮಿತಿ ವತಿಯಿಂದ ಅರಿವು ಕಾರ್ಯಕ್ರಮವನ್ನು ಜು.14 ರಂದು ಆಯೋಜಿಸಲಾಗಿತ್ತು.

ಜಿಲ್ಲಾ ಮಕ್ಕಳ ಹಕ್ಕುಗಳ ಪ್ರಾಧಿಕಾರದ ಸೂಚನೆಯಂತೆ ಈ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರದಲ್ಲಿ ‘ಸುರಕ್ಷಿತ ಸ್ಪರ್ಶ ಮತ್ತು ಅಸುರಕ್ಷಿತ ಸ್ಪರ್ಶ’ ಮತ್ತು ‘ಹದಿ ಹರೆಯದ ಸಮಸ್ಯೆಗಳು’ ಈ ವಿಷಯದ ಬಗ್ಗೆ ಮಾಹಿತಿ ನೀಡಲಾಯಿತು.
ಬೆಳ್ತಂಗಡಿ ತಾಲೂಕು ಅರೋಗ್ಯ ಇಲಾಖೆಯ ಅರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹೆಣ್ಣು ಮಕ್ಕಳಿಗೆ ಸೂಕ್ತ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಇವರು ಮಕ್ಕಳಿಗೆ ಕೆಲವು ಚಟುವಟಿಕೆಗಳನ್ನು ನಡೆಸಿದರು. ಕಾರ್ಯಕ್ರಮದ ಕೊನೆಯಲ್ಲಿ ಹೆಣ್ಣು ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಿರುವುದು ಕಾರ್ಯಕ್ರಮದ ಮುಖ್ಯ ಅಂಗವಾಗಿತ್ತು.

ಕಾರ್ಯಕ್ರಮ ಆರಂಭದಲ್ಲಿ ಮುಖ್ಯ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ಇವರು ಸಂಪನ್ಮೂಲಗಳು ವ್ಯಕ್ತಿಗಳನ್ನು ಪರಿಚಯಿಸಿ ಪ್ರಾಸ್ತವಿಕವಾಗಿ ಮಾತಾಡಿದರು. ಕಾರ್ಯಕ್ರಮದ ನೋಡಲ್ ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ಪೈ ಕಾರ್ಯಕ್ರಮವನ್ನು ಸಂಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಕೊಕ್ಕಡ ವಲಯದ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ರೇಖಾ ಭಾಗವಹಿಸಿದ್ದರು.











