22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

ಬಂದಾರು: ಬಂದಾರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.17 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಅಧ್ಯಕ್ಷತೆಯಲ್ಲಿ ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ಸಭೆಯನ್ನು ಮುನ್ನಡೆಸಿದರು. ‌

ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾವಾರು ಮಾಹಿತಿ ನೀಡಿದರು.

ಈ ವೇಳೆ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಗ್ರಾಮಕ್ಕೆ ಹೆಸರು ತಂದು ಕೀರ್ತಿ ಪೆರ್ಲ ಬೈಪಾಡಿ ಹಾಗೂ ಬುಳೇರಿ ಶಾಲೆಯ ಮುಖ್ಯೋಪಾಧ್ಯಾಯರನ್ನು ಗೌರವಿಸಲಾಯಿತು. ನಿವೃತ್ತ ಸರ್ಕಾರಿ ಅಧಿಕಾರಿ ರತ್ನವಾತಿ ಅವರನ್ನು ಸನ್ಮಾನಿಸಲಾಯಿತು

ಉಪಾಧ್ಯಕ್ಷೆ ಪುಷ್ಪಾವತಿ ಸದಸ್ಯರಾದ ಚೇತನ್ ಕುಮಾರ್, ವಿಮಲ, ಭಾರತಿ, ಗಂಗಧಾರ ಪೂಜಾರಿ, ಸುಚಿತ್ರಾ, ಅನಿತಾ, ಶಿವ ಗೌಡ, ಬಾಲಕೃಷ್ಣ ಗೌಡ ಎಂ. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ಜಿ . ಸ್ವಾಗತಿಸಿದರು. ಸಿಬ್ಬಂದಿಗಳಾದ ದಿನಕರ ಜಮಾ ಖುರ್ಚಿನ ವಿವರ ನೀಡಿದರು ಮತ್ತು ಪ್ರವೀಣ್ ವಾರ್ಡ್ ಸಭೆ ಬೇಡಿಕೆ ವಾಚಿಸಿದರು. ಸಿಬ್ಬಂದಿಗಳಾದ ಶಾಂತಿ.ಬಿ, ಉಷಾ, ಪವಿತ್ರ, ಸಹನ, ಸರೋಜಿನಿ, ಕೇಶವ, ರಕ್ಷಿತಾ ಸಹಕರಿಸಿದರು.

Related posts

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಗುರುವಾಯನಕೆರೆ ಸಮೀಪ ಬದ್ಯಾರುವಿನಲ್ಲಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಗಂಭೀರ

Suddi Udaya

ಉಜಿರೆ: ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ ನಾಪತ್ತೆ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕರುನಾಡು Got ಟ್ಯಾಲೆಂಟ್ ರಿಯಾಲಿಟಿ ಶೋ ಗೆ ಆಯ್ಕೆಯಾದ ಉಜಿರೆಯ ಹಿಪ್-ಬಾಯ್ಸ್ ನೃತ್ಯ ತಂಡ

Suddi Udaya

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

Suddi Udaya
error: Content is protected !!