23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಕೊಕ್ಕಡ : ಕೊಕ್ಕಡ ಆನೆ ದಾಳಿಯಿಂದ ಮೃತ ಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಕುಟುಂಬಕ್ಕೆ ರೂ.20 ಲಕ್ಷ ಪರಿಹಾರ, 5 ವರ್ಷ ತಿಂಗಳಿಗೆ 4 ಸಾವಿರದಂತೆ ಮಾಸಿಕ ಸಹಾಯಧನ ನೀಡುವಂತೆ, ಮೃತರ ಪತ್ನಿ ಸೌತಡ್ಕ ದೇವಸ್ಥಾನದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕೆಲಸಕ್ಕೆ ಇದ್ದು ಪರ್ಮನೆಂಟ್ ಮಾಡುವ ಬಗ್ಗೆ, ಮೃತರ ಮಕ್ಕಳಲ್ಲಿ ಒಬ್ಬರಿಗೆ ಅರಣ್ಯ ಇಲಾಖೆಯಲ್ಲಿ ಉದ್ಯೋಗ ನೀಡುವ ಬಗ್ಗೆ ಮಾತನಾಡಿದರು. ಅಲ್ಲದೆ ಆನೆ ಕ್ಯಾಂಪ್ ಮಾಡುವ ಬಗ್ಗೆ, ಆನೆಗಳು ಜನನಿಬಿಡ ಪ್ರದೇಶಕ್ಕೆ ಬರದಂತೆ ಅರಣ್ಯದಂಚಿಗೆ ರೈಲ್ವೆ ಹಳಿಯಂತ ಬೇಲಿ ನಿರ್ಮಿಸುವ ಬಗ್ಗೆ ಪ್ರಯತ್ನಿಸುವುದಾಗಿ ಹೇಳಿದರು. ಈಗಾಗಲೇ ದುಬಾರೆ ಆನೆ ಶಿಬಿರದಿಂದ ಬಂದ ಪರಿಣಿತರಿಂದ ಆನೆಗಳನ್ನು ಕಾಡಿಗೆ ಅಟ್ಟುವ ಕೆಲಸ ಪ್ರಾರಂಭವಾಗಿದೆ ಎಂದರು.

ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾ. ಪಂ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಳಂಬಿಲ, ಮಾಜಿ ಉಪಾಧ್ಯಕ್ಷೆ ಪವಿತ್ರ ಗುರುಪ್ರಸಾದ್, ಗ್ರಾಪಂ ಅಧ್ಯಕ್ಷೆ ಶ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯರಾದ ವಿಠಲ ಕುರ್ಲೆ, ಪ್ರಶಾಂತ್ ಪೂವಾಜೆ, ರಂಜು ಕೊಕ್ಕಡ, ರಾಘವ ಭಂಡಾರಿ, ಉದ್ಯಮಿ ಬಾಲಕೃಷ್ಣ ನೈಮಿಷ, ಪಕ್ಷದ ಕಾರ್ಯಕರ್ತರು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯ್ಕ್, ಪ್ರೊಫೆಷನರಿ ಅರಣ್ಯಾಧಿಕಾರಿ ಹಸ್ತಾ ಶೆಟ್ಟಿ, ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ನೇಹಾ ಹತ್ಯೆ ಖಂಡಿಸಿ ಪ್ರತಿಭಟಿಸಿದ್ದ ಉಜಿರೆಯ ಎಬಿವಿಪಿ ನಾಯಕರ ಮೇಲೆ ಎಫ್‌ಐಆರ್ ದಾಖಲು

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ “ಸಂದರ್ಶನ ಕೌಶಲ್ಯಗಳ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಕೊಯ್ಯೂರಿನಲ್ಲಿ ಕ.ಸಾ.ಪ ತಾಲೂಕು ಸಮ್ಮೇಳನ; ಡಾ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

Suddi Udaya
error: Content is protected !!