25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಯಾಂತ್ರಿಕೃತ ಭತ್ತದ ಕೃಷಿ ನಾಟಿ ಗೆ ಸಸಿ ಮಡಿಯನ್ನು ಶ್ರೀ ಕ್ಷೇ, ಧ ,ಗ್ರಾ ಯೋ, ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ಡಿ ರವರು ಗದ್ದೆ ಮನೆಯ ಪ್ರಗತಿಪರ ಕೃಷಿಕ ವಿಶ್ವನಾಥ ರವರಿಗೆ ಹಸ್ತಂತರಿಸಿದರು

ಈ ವೇಳೆ ಮಾತನಾಡಿದ ದಿನೇಶ್ ರವರು ಭತ್ತ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಯುವ ಜನತೆ ಭತ್ತ ಕೃಷಿಯತ್ತ ಆಕರ್ಷಣೆಯಾಗುತ್ತಿದ್ದು,ಇಂದು ಭತ್ತ ಕೃಷಿ ಉಳಿಯಲು ಯಂತ್ರೋಪಕರಣವೇ ಮೂಲ ಆಧಾರವಾಗಿದೆ. ಕೂಲಿಯಾಳುಗಳ ಸಮಸ್ಯೆಯನ್ನು ನಿವಾರಿಸಿ ಇಂದು ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಪಡೆಯಲು,ಕ್ಲಪ್ತ ಸಮಯದಲ್ಲಿ ಉಳುಮೆ ನಾಟಿ, ಕಟಾವಿಗೆ ಯಂತ್ರಗಳ ಪೂರ್ಣವಾದ ಬಳಕೆ ಮಾಡುತ್ತಿರುವುದರಿಂದ ಭತ್ತ ಕೃಷಿಯು ಅತ್ಯಂತ ಸುಲಭದ ಕೃಷಿಯಾಗಿದೆ ಎಂದು ಮಾಹಿತಿ ನೀಡಿದರು.

ತಾಲೂಕಿನ ಯೋಜನಾಧಿಕಾರಿ ಅಶೋಕ್, ಕೃಷಿ ಮೇಲ್ವಿಚಾರಕರು ಕೃಷ್ಣ, csc ನೋಡಲ್ ಅಧಿಕಾರಿ ಸುರೇಶ, ವಲಯ ಮೇಲ್ವಿಚಾರಕರು ಯಶೋಧ, ಪ್ರಗತಿಪರ ರೈತರು ಉಪಸ್ಥಿತರಿದ್ದರು

Related posts

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅಗ್ರಗಣ್ಯ ಸ್ವಾತಂತ್ರ್ಯ ಹೋರಾಟಗಾರ ಉಪ್ಪಿನಂಗಡಿಯ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಸ.ಕಿ.ಪ್ರಾ. ಶಾಲೆಯಲ್ಲಿ ಜನಗಣಮನ ಬರವಣಿಗೆ ಸ್ಪರ್ಧೆ

Suddi Udaya

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಂಧನ

Suddi Udaya
error: Content is protected !!